<p><strong>ಬೆಂಗಳೂರು:</strong> ‘ದಂಪತಿ ಪರಸ್ಪರ ಸಮ್ಮತಿಯ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ವಿಚಾರಣಾ ನ್ಯಾಯಾಲಯ ಅಂತಹ ಅರ್ಜಿಯನ್ನು ಏಕಾಏಕಿ ವಜಾಗೊಳಿಸುವಂತಿಲ್ಲ. ಹಿಂದೂ ವಿವಾಹ ಕಾಯ್ದೆಯ ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ‘ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ವಿಚ್ಛೇದನ ಕೋರಿ ದಂಪತಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ದಂಪತಿಗೆ ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದೆ.</p>.<p>‘ಮಧ್ಯಸ್ಥಿಕೆ ಕೇಂದ್ರವು ವಿಚಾರಣಾ ನ್ಯಾಯಾಲಯಕ್ಕೆ ಮಧ್ಯಸ್ಥಿಕೆ ವರದಿಯನ್ನು ಸಲ್ಲಿಸಬೇಕು. ಆ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ವಿಚ್ಛೇದನದ ಅರ್ಜಿ ಇತ್ಯರ್ಥಪಡಿಸಬಹುದು. ಪಕ್ಷಗಾರರ ಮನವಿ ಇಲ್ಲದೆ ವಿಚಾರಣಾ ನ್ಯಾಯಾಲಯ ತನ್ನಷ್ಟಕ್ಕೆ ತಾನೇ ಅರ್ಜಿ ವಜಾಗೊಳಿಸಬಾರದು‘ ಎಂದು ತಾಕೀತು ಮಾಡಿದೆ.</p>.<p>‘ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ಕೇವಲ 9 ತಿಂಗಳಿಗೇ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಆದರೆ ಅದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯ ಕಲಂ 13 ಬಿ (2) ಅನ್ನು ಪಾಲನೆ ಮಾಡಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಹಿಂದೂ ವಿವಾಹ ಕಾಯ್ದೆ–1955ರ ಕಲಂ 13ಬಿ ಅನ್ವಯ, ದಂಪತಿ ಅರ್ಜಿ ಸಲ್ಲಿಸುವ ಮುನ್ನ ಒಂದು ವರ್ಷ ಪ್ರತ್ಯೇಕವಾಗಿ ವಾಸವಿರಬೇಕು. ಪರಸ್ಪರ ವಿವಾಹ ಸಂಬಂಧ ಮುರಿದುಕೊಳ್ಳಲು ಒಪ್ಪಿರಬೇಕು ಹಾಗೂ ಅರ್ಜಿ ಸಲ್ಲಿಸಿದ ಆರು ತಿಂಗಳವರೆಗೆ ಅವರು ಆ ಅರ್ಜಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವಂತಿಲ್ಲ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>ಪ್ರಕರಣವೇನು?: ಅರ್ಜಿದಾರ ದಂಪತಿ 2020ರ ನವೆಂಬರ್ 27ರಂದು ಮದುವೆಯಾಗಿದ್ದರು. 2021ರ ಸೆಪ್ಟೆಂಬರ್ನಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ವಿವಾಹ ಬಂಧನ ತೊಡೆದುಕೊಳ್ಳಲು ಪರಸ್ಪರ ಒಪ್ಪಿಗೆ ಮೇರೆಗೆ ವಿವಾಹ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ವಿಚಾರಣಾ ನ್ಯಾಯಾಲಯ, ದಂಪತಿ ಒಂದುಗೂಡುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ವರ್ಗಾಯಿಸಿತ್ತು. ಇಬ್ಬರೂ ಮಧ್ಯಸ್ಥಿಕೆಗೆ ಗೈರು ಹಾಜರಾಗಿದ್ದರು. ಮಧ್ಯಸ್ಥಿಕೆ ಕೇಂದ್ರ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ, ‘ದಂಪತಿಗೆ ಈ ಪ್ರಕರಣ ಮುನ್ನಡೆಸಲು ಆಸಕ್ತಿ ಇಲ್ಲ‘ ಎಂದು ದಾಖಲಿಸಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದಂಪತಿ ಪರಸ್ಪರ ಸಮ್ಮತಿಯ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ವಿಚಾರಣಾ ನ್ಯಾಯಾಲಯ ಅಂತಹ ಅರ್ಜಿಯನ್ನು ಏಕಾಏಕಿ ವಜಾಗೊಳಿಸುವಂತಿಲ್ಲ. ಹಿಂದೂ ವಿವಾಹ ಕಾಯ್ದೆಯ ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ‘ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.</p>.<p>ವಿಚ್ಛೇದನ ಕೋರಿ ದಂಪತಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ದಂಪತಿಗೆ ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದೆ.</p>.<p>‘ಮಧ್ಯಸ್ಥಿಕೆ ಕೇಂದ್ರವು ವಿಚಾರಣಾ ನ್ಯಾಯಾಲಯಕ್ಕೆ ಮಧ್ಯಸ್ಥಿಕೆ ವರದಿಯನ್ನು ಸಲ್ಲಿಸಬೇಕು. ಆ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ವಿಚ್ಛೇದನದ ಅರ್ಜಿ ಇತ್ಯರ್ಥಪಡಿಸಬಹುದು. ಪಕ್ಷಗಾರರ ಮನವಿ ಇಲ್ಲದೆ ವಿಚಾರಣಾ ನ್ಯಾಯಾಲಯ ತನ್ನಷ್ಟಕ್ಕೆ ತಾನೇ ಅರ್ಜಿ ವಜಾಗೊಳಿಸಬಾರದು‘ ಎಂದು ತಾಕೀತು ಮಾಡಿದೆ.</p>.<p>‘ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ಕೇವಲ 9 ತಿಂಗಳಿಗೇ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಆದರೆ ಅದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯ ಕಲಂ 13 ಬಿ (2) ಅನ್ನು ಪಾಲನೆ ಮಾಡಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಹಿಂದೂ ವಿವಾಹ ಕಾಯ್ದೆ–1955ರ ಕಲಂ 13ಬಿ ಅನ್ವಯ, ದಂಪತಿ ಅರ್ಜಿ ಸಲ್ಲಿಸುವ ಮುನ್ನ ಒಂದು ವರ್ಷ ಪ್ರತ್ಯೇಕವಾಗಿ ವಾಸವಿರಬೇಕು. ಪರಸ್ಪರ ವಿವಾಹ ಸಂಬಂಧ ಮುರಿದುಕೊಳ್ಳಲು ಒಪ್ಪಿರಬೇಕು ಹಾಗೂ ಅರ್ಜಿ ಸಲ್ಲಿಸಿದ ಆರು ತಿಂಗಳವರೆಗೆ ಅವರು ಆ ಅರ್ಜಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವಂತಿಲ್ಲ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.</p>.<p>ಪ್ರಕರಣವೇನು?: ಅರ್ಜಿದಾರ ದಂಪತಿ 2020ರ ನವೆಂಬರ್ 27ರಂದು ಮದುವೆಯಾಗಿದ್ದರು. 2021ರ ಸೆಪ್ಟೆಂಬರ್ನಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ವಿವಾಹ ಬಂಧನ ತೊಡೆದುಕೊಳ್ಳಲು ಪರಸ್ಪರ ಒಪ್ಪಿಗೆ ಮೇರೆಗೆ ವಿವಾಹ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ವಿಚಾರಣಾ ನ್ಯಾಯಾಲಯ, ದಂಪತಿ ಒಂದುಗೂಡುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ವರ್ಗಾಯಿಸಿತ್ತು. ಇಬ್ಬರೂ ಮಧ್ಯಸ್ಥಿಕೆಗೆ ಗೈರು ಹಾಜರಾಗಿದ್ದರು. ಮಧ್ಯಸ್ಥಿಕೆ ಕೇಂದ್ರ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ, ‘ದಂಪತಿಗೆ ಈ ಪ್ರಕರಣ ಮುನ್ನಡೆಸಲು ಆಸಕ್ತಿ ಇಲ್ಲ‘ ಎಂದು ದಾಖಲಿಸಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>