ಮೈಸೂರು: ‘ಮುಸ್ಲಿಂ ಧಾರ್ಮಿಕ ಕೇಂದ್ರಗಳ ಆಡಳಿತಕ್ಕೆ ವಕ್ಫ್ ಬೋರ್ಡ್, ಕ್ರೈಸ್ತರ ಧಾರ್ಮಿಕ ಕೇಂದ್ರಗಳ ಆಡಳಿತಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆ. ಹಿಂದೂ ದೇಗುಲಗಳ ಆಡಳಿತ, ಅಭಿವೃದ್ಧಿಗೆ ಏಕೆ ಪ್ರತ್ಯೇಕ ವ್ಯವಸ್ಥೆ ಇರಬಾರದು? ಬೇರೆ ಯಾವುದೋ ಒಂದು ವೋಟ್ ಬ್ಯಾಂಕ್ ಓಲೈಕೆಗಾಗಿ, ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್ ಅದನ್ನು ವಿರೋಧಿಸುತ್ತಿದೆ’ ಎಂದು ಶಾಸಕ ಎಸ್.ಎ.ರಾಮದಾಸ್ ಟೀಕಿಸಿದರು.