<p><strong>ಬೆಂಗಳೂರು</strong>: ಬಜಪೆಯಲ್ಲಿ ನಡೆದ ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ಈ ಘಟನೆ ನಡೆದಿರುವುದು ಖಂಡನೀಯ. ಹಿಂದೂ ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ' ಎಂದು ಹೇಳಿದ್ದಾರೆ. </p>.ಮೈಸೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ–ಮೇಲ್: ಪ್ರಕರಣ ದಾಖಲು.Kedarnath Yatra | ಭಕ್ತರಿಗೆ ದರ್ಶನ ನೀಡಿದ 'ಕೇದಾರನಾಥ'. <p>ಈ ಘಟನೆಯಿಂದಾಗಿ 'ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ. ಬಿಜೆಪಿಯ ನಾಯಕರು ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿದ್ದೇವೆ. ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ' ಎಂದು ಪೋಸ್ಟ್ನಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.</p><p>'ಈ ರೀತಿಯ ಘಟನೆ ನಡೆದಾಗ ರಾಜ್ಯ ಸರ್ಕಾರ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ' ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.</p>.ಪಿಣರಾಯಿ ವಿಜಯನ್–ತರೂರ್ ಉಪಸ್ಥಿತಿ ಅನೇಕರಿಗೆ ನಿದ್ದೆಗೆಡಿಸಲಿದೆ: ಮೋದಿ ವ್ಯಂಗ್ಯ.India - Pak Tensions: ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿ ಗಡೀಪಾರಿಗೆ SC ತಡೆ.ವಾಘಾ ಗಡಿ ಮೂಲಕ ಪ್ರಜೆಗಳು ದೇಶಕ್ಕೆ ಮರಳಬಹುದು: ಪಾಕಿಸ್ತಾನ.ಕೋಲ್ಕತ್ತ | ಹೋಟೆಲ್ನಲ್ಲಿ ಬೆಂಕಿ ಅವಘಡ: ಮತ್ತೊಬ್ಬ ವ್ಯಕ್ತಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಜಪೆಯಲ್ಲಿ ನಡೆದ ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ಈ ಘಟನೆ ನಡೆದಿರುವುದು ಖಂಡನೀಯ. ಹಿಂದೂ ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ' ಎಂದು ಹೇಳಿದ್ದಾರೆ. </p>.ಮೈಸೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ–ಮೇಲ್: ಪ್ರಕರಣ ದಾಖಲು.Kedarnath Yatra | ಭಕ್ತರಿಗೆ ದರ್ಶನ ನೀಡಿದ 'ಕೇದಾರನಾಥ'. <p>ಈ ಘಟನೆಯಿಂದಾಗಿ 'ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ. ಬಿಜೆಪಿಯ ನಾಯಕರು ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿದ್ದೇವೆ. ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ' ಎಂದು ಪೋಸ್ಟ್ನಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.</p><p>'ಈ ರೀತಿಯ ಘಟನೆ ನಡೆದಾಗ ರಾಜ್ಯ ಸರ್ಕಾರ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ' ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.</p>.ಪಿಣರಾಯಿ ವಿಜಯನ್–ತರೂರ್ ಉಪಸ್ಥಿತಿ ಅನೇಕರಿಗೆ ನಿದ್ದೆಗೆಡಿಸಲಿದೆ: ಮೋದಿ ವ್ಯಂಗ್ಯ.India - Pak Tensions: ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿ ಗಡೀಪಾರಿಗೆ SC ತಡೆ.ವಾಘಾ ಗಡಿ ಮೂಲಕ ಪ್ರಜೆಗಳು ದೇಶಕ್ಕೆ ಮರಳಬಹುದು: ಪಾಕಿಸ್ತಾನ.ಕೋಲ್ಕತ್ತ | ಹೋಟೆಲ್ನಲ್ಲಿ ಬೆಂಕಿ ಅವಘಡ: ಮತ್ತೊಬ್ಬ ವ್ಯಕ್ತಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>