ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಪ್ಪರಗಿ ನೀರಾವರಿ ಯೋಜನೆ | ಭೂ ಸಂತ್ರಸ್ತರಿಗೆ ಎಕರೆಗೆ ₹4.5 ಲಕ್ಷ ಪರಿಹಾರ; SC

Published 8 ಮೇ 2024, 22:39 IST
Last Updated 8 ಮೇ 2024, 22:39 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಹಿಪ್ಪರಗಿ ಬ್ಯಾರೇಜ್‌ ಯೋಜನೆಯಡಿ ಕಾಲುವೆಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡಿರುವ ಜಮೀನಿನ ಮಾಲೀಕರು ಎಲ್ಲ ಶಾಸನಬದ್ಧ ಪ್ರಯೋಜನಗಳು ಹಾಗೂ ಬಡ್ಡಿ ಸೇರಿದಂತೆ ಎಕರೆಗೆ ₹4.5 ಲಕ್ಷ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 

ಯೋಜನೆಗಾಗಿ ಭೂಮಿ ಕಳೆದುಕೊಂಡ ಶ್ರೀಪಾಲ್‌ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸಂದೀಪ್‌ ಮೆಹ್ತಾ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. 

ಈ ಯೋಜನೆಗಾಗಿ ಭೂಸ್ವಾಧೀನಕ್ಕೆ 2004–05ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರತಿ ಎಕರೆಗೆ ₹1.31 ಲಕ್ಷ ಪರಿಹಾರ ನಿಗದಿಪಡಿಸಿ ವಿಶೇಷ ಭೂಸ್ವಾಧೀನ ಅಧಿಕಾರಿಯವರು ಆದೇಶ ಹೊರಡಿಸಿದ್ದರು. ಮಾರುಕಟ್ಟೆ ಮೌಲ್ಯದ ಪ್ರಕಾರ ಪ್ರತಿ ಎಕರೆಗೆ ₹3 ಲಕ್ಷ ಪರಿಹಾರ ನೀಡಬೇಕು ಎಂದು ಕೋರಿ ಭೂಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರತಿ ಎಕರೆಗೆ ₹3.69 ಲಕ್ಷ ಪರಿಹಾರ ನಿಗದಿಪಡಿಸಿ ಹೈಕೋರ್ಟ್‌ ಧಾರವಾಡ ಪೀಠ 2014ರಲ್ಲಿ ಆದೇಶಿಸಿತ್ತು. ಇದೇ ಯೋಜನೆಗಾಗಿ ಭೂಮಿ ಕಳೆದುಕೊಂಡವರಿಗೆ ಪ್ರತಿ ಎಕರೆಗೆ ₹5 ಲಕ್ಷ ಪರಿಹಾರ ನಿಗದಿಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ 2021ರಲ್ಲಿ ಆದೇಶ ಹೊರಡಿಸಿತ್ತು. ಉಳಿದ ಭೂಸಂತ್ರಸ್ತರಿಗೂ ₹5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಭೂಮಾಲೀಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ‘2009ರಲ್ಲಿ ಅಧಿಸೂಚನೆ ಹೊರಡಿಸಿ ಭೂಮಿ ಕಳೆದುಕೊಂಡ ಭೂಮಾಲೀಕರಿಗೆ ₹5 ಲಕ್ಷ ಪರಿಹಾರ ನೀಡಲಾಗಿದೆ’ ಎಂದು ಕರ್ನಾಟಕ ನೀರಾವರಿ ನಿಗಮದ ವಕೀಲರು ವಾದಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT