ಸ್ಪಷ್ಟೀಕರಣ ನೀಡಿದ ಸಚಿವ ಕೃಷ್ಣ ಬೈರೇಗೌಡ, ‘ಅನುದಾನವನ್ನು ನಾಲ್ಕು ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮೊದಲ ಎರಡು ಕಂತುಗಳ ಹಣವನ್ನು ಶೇ 75ರಷ್ಟು ಬಳಕೆ ಆದರೆ ಮಾತ್ರ ಮೂರನೇ ಮತ್ತು ನಾಲ್ಕನೇ ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ. ಆದರೆ, ಬಿಡುಗಡೆಯಾದ ಅನುದಾನವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.