ಒಂಬತ್ತು ದಶಕಗಳ ನಂತರ ಜಾತಿ ಗಣತಿ ನಡೆದಿದೆ. ದೇಶದಲ್ಲೇ ರಾಜ್ಯದಲ್ಲಿ ಮೊದಲ ಬಾರಿಗೆ ವೈಜ್ಞಾನಿಕವಾಗಿ ಇಂತಹ ಗಣತಿ ನಡೆದಿದ್ದು, ಈ ವರದಿ ಹೊರ ಬಂದರೆ ಯಾವ ಜಾತಿಗಳು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿವೆ ಎಂಬುದು ಗೊತ್ತಾಗುತ್ತದೆ. ಆ ಕಾರಣಕ್ಕಾಗಿ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.