ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎಚ್‌ಎಂಪಿವಿ | ಭಯ ಬೇಕಿಲ್ಲ: ಆರೋಗ್ಯ ಇಲಾಖೆ

Published : 6 ಜನವರಿ 2025, 19:13 IST
Last Updated : 6 ಜನವರಿ 2025, 19:13 IST
ಫಾಲೋ ಮಾಡಿ
Comments
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಎಚ್‌ಎಂಪಿವಿ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ತೆಗೆದುಕೊಳ್ಳಲಿವೆ. ಈ ಬಗ್ಗೆ ಸೂಚನೆ ನೀಡಲಾಗಿದೆ
ಸಿದ್ದರಾಮಯ್ಯ ಮುಖ್ಯಮಂತ್ರಿ
ಸರ್ಕಾರ ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಕಾರ್ಯಪಡೆ ಹಾಗೂ ತಜ್ಞ ವೈದ್ಯರ ಸಮಿತಿ ರಚಿಸಲಿ ಆರ್.ಅಶೋಕ, ವಿರೋಧ ಪಕ್ಷದ ನಾಯಕ
ಎಚ್‌ಎಂಪಿವಿ ಎಂದರೇನು ?
ಹ್ಯೂಮನ್ ಮೆಟಾನ್ಯುಮೊ ವೈರಸ್‌– ಎಚ್‌ಎಂಪಿವಿಯ ವಿಸ್ತೃತ ರೂಪ. ಇದು ಉಸಿರಾಟದ ಸೋಂಕಿಗೆ ಕಾರಣವಾಗುವ ವೈರಾಣು. ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವವರಿಗೆ, ಮಕ್ಕಳು ಮತ್ತು ವೃದ್ಧರಿಗೆ ಹೆಚ್ಚಾಗಿ ಈ ವೈರಾಣು ಹರಡುತ್ತದೆ. 2001ರಲ್ಲಿ ನೆದರ್ಲೆಂಡ್ಸ್‌ನಲ್ಲಿ ಪತ್ತೆಯಾಯಿತು.
ಚೆನ್ನೈ, ಅಹಮದಾಬಾದ್‌ನಲ್ಲೂ ಪತ್ತೆ
ಚೆನ್ನೈ/ಅಹಮದಾಬಾದ್ (ಪಿಟಿಐ): ಚೆನ್ನೈನಲ್ಲಿ ಎರಡು ಮತ್ತು ಅಹಮದಾಬಾದ್‌ನಲ್ಲಿ ಒಂದು ಹ್ಯೂಮನ್ ಮೆಟಾನ್ಯುಮೋವೈರಸ್ (ಎಚ್‌ಎಂಪಿವಿ) ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎರಡು ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ಪತ್ತೆಯಾಗಿದೆ. ರಾಜಸ್ಥಾನದ ಡುಂಗರ್‌ಪುರದ ಮಗುವಿನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡದ್ದರಿಂದ ಇಲ್ಲಿನ ಚಾಂದ್‌ಖೇಡಾ ಪ್ರದೇಶದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಎಚ್‌ಎಂಪಿವಿ ಇರುವುದು ಪತ್ತೆಯಾಗಿದೆ. ಎಚ್‌ಎಂಪಿವಿ ಇರುವುದು ಡಿ.26ರಂದೇ ಪತ್ತೆಯಾಗಿದ್ದರೂ, ಆಸ್ಪತ್ರೆಯವರು ನಮಗೆ ತಡವಾಗಿ ಮಾಹಿತಿ ನೀಡಿದ್ದಾರೆ’ ಎಂದು ಅಹಮದಾಬಾದ್‌ ನಗರ ಪಾಲಿಕೆಯ ವೈದ್ಯಾಧಿಕಾರಿ ಭವಿನ್‌ ಸೋಳಂಕಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT