<p><strong>ಬೆಂಗಳೂರು</strong>: ಶಿಕ್ಷಣ ತಜ್ಞ, ವಿಚಾರವಾದಿ ಎಚ್.ನರಸಿಂಹಯ್ಯ (ಎಚ್ಎನ್) ಅವರ ವಿಚಾರವಂತಿಕೆಯನ್ನು ನ್ಯಾಷನಲ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಯುವಜನರು ಅಳವಡಿಸಿಕೊಳ್ಳಬೇಕು ಎಂದು ಡಾ.ಎಚ್.ಎನ್.ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದರು. </p>.<p>ಎಚ್ಎನ್ ಅವರ ನೆನಪಿನಲ್ಲಿ ಆರಂಭವಾಗಿರುವ ‘ಡಾ.ಎಚ್.ಎನ್.ಗ್ಲೋಬಲ್ ಫೋರಂ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಎಚ್ಎನ್ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದರು. </p>.<p>ಕಾರ್ಯಕ್ರಮದಲ್ಲಿ ಗೌರಿಬಿದನೂರಿನ ಎಇಎಸ್ ನ್ಯಾಷನಲ್ ಕಾಲೇಜು, ಬಾಗೇಪಲ್ಲಿ ನ್ಯಾಷನಲ್ ಕಾಲೇಜು, ಬೆಂಗಳೂರಿನ ಜಯನಗರ, ಬಸವನಗುಡಿ ನ್ಯಾಷನಲ್ ಕಾಲೇಜುಗಳ ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಧ್ಯಾಪಕರು ಭಾಗವಹಿಸಿದ್ದರು.</p>.<p>ಗ್ರಾಮೀಣ ಪ್ರದೇಶದಲ್ಲಿ ಪ್ರೌಢಶಾಲೆ, ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಎಚ್.ನರಸಿಂಹಯ್ಯ ಅವರು ಲಕ್ಷಾಂತರ ಮಂದಿ ವಿದ್ಯಾವಂತರಾಗಲು ಕಾರಣಕರ್ತರಾದರು ಎಂದು ಸ್ಮರಿಸಿದ ನಿವೃತ್ತ ಪ್ರಾಧ್ಯಾಪಕ ಕೆ.ಎನ್.ವೆಂಕಟಕೃಷ್ಣರಾವ್ ಅವರು ಎಚ್ಎನ್, ವಿಶ್ವೇಶ್ವರಯ್ಯ ಅವರಂಥ ಮಹನೀಯರ ವಿಚಾರಗಳನ್ನು ಪಠ್ಯಗಳನ್ನಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು. </p>.<p>ಎಚ್ಎನ್ ಅವರು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ವಿಚಾರವಾದ, ವೈಜ್ಞಾನಿಕ ಮನೋಭಾವಕ್ಕೆ ಉತ್ತೇಜನ ನೀಡಿದರು. ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸಾಮಾಜಿಕ ಜವಾಬ್ದಾರಿ ಬೆಳೆಸುವುದು ಅತಿ ಮುಖ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ನಗರಗೆರೆ ರಮೇಶ್ ಹೇಳಿದರು. </p>.<p>ಎಚ್ಎನ್ ಗ್ಲೋಬಲ್ ಫೋರಂ ಮೂಲಕ ಹಿಂದುಳಿದ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕೌಶಲ, ಸ್ಪರ್ಧಾತ್ಮಕತೆ ಬೆಳೆಸುವುದು ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ ಫೋರಂ ಸಂಚಾಲಕರಾದ ಆರ್.ಕೆ.ಮಂಜುನಾಥ್, ತಮ್ಮ ಕಾರ್ಯಚಟುವಟಿಕೆಗಳ ನೀಲನಕ್ಷೆಯನ್ನು ಪ್ರಸ್ತುತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಸಿ.ನಾಗರಾಜ್, ಪ್ರಾಧ್ಯಾಪಕ ಎಸ್.ಕೆ.ನಾರಾಯಣ್ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು, ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿಕ್ಷಣ ತಜ್ಞ, ವಿಚಾರವಾದಿ ಎಚ್.ನರಸಿಂಹಯ್ಯ (ಎಚ್ಎನ್) ಅವರ ವಿಚಾರವಂತಿಕೆಯನ್ನು ನ್ಯಾಷನಲ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಯುವಜನರು ಅಳವಡಿಸಿಕೊಳ್ಳಬೇಕು ಎಂದು ಡಾ.ಎಚ್.ಎನ್.ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದರು. </p>.<p>ಎಚ್ಎನ್ ಅವರ ನೆನಪಿನಲ್ಲಿ ಆರಂಭವಾಗಿರುವ ‘ಡಾ.ಎಚ್.ಎನ್.ಗ್ಲೋಬಲ್ ಫೋರಂ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಎಚ್ಎನ್ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದರು. </p>.<p>ಕಾರ್ಯಕ್ರಮದಲ್ಲಿ ಗೌರಿಬಿದನೂರಿನ ಎಇಎಸ್ ನ್ಯಾಷನಲ್ ಕಾಲೇಜು, ಬಾಗೇಪಲ್ಲಿ ನ್ಯಾಷನಲ್ ಕಾಲೇಜು, ಬೆಂಗಳೂರಿನ ಜಯನಗರ, ಬಸವನಗುಡಿ ನ್ಯಾಷನಲ್ ಕಾಲೇಜುಗಳ ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಧ್ಯಾಪಕರು ಭಾಗವಹಿಸಿದ್ದರು.</p>.<p>ಗ್ರಾಮೀಣ ಪ್ರದೇಶದಲ್ಲಿ ಪ್ರೌಢಶಾಲೆ, ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಎಚ್.ನರಸಿಂಹಯ್ಯ ಅವರು ಲಕ್ಷಾಂತರ ಮಂದಿ ವಿದ್ಯಾವಂತರಾಗಲು ಕಾರಣಕರ್ತರಾದರು ಎಂದು ಸ್ಮರಿಸಿದ ನಿವೃತ್ತ ಪ್ರಾಧ್ಯಾಪಕ ಕೆ.ಎನ್.ವೆಂಕಟಕೃಷ್ಣರಾವ್ ಅವರು ಎಚ್ಎನ್, ವಿಶ್ವೇಶ್ವರಯ್ಯ ಅವರಂಥ ಮಹನೀಯರ ವಿಚಾರಗಳನ್ನು ಪಠ್ಯಗಳನ್ನಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು. </p>.<p>ಎಚ್ಎನ್ ಅವರು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ವಿಚಾರವಾದ, ವೈಜ್ಞಾನಿಕ ಮನೋಭಾವಕ್ಕೆ ಉತ್ತೇಜನ ನೀಡಿದರು. ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸಾಮಾಜಿಕ ಜವಾಬ್ದಾರಿ ಬೆಳೆಸುವುದು ಅತಿ ಮುಖ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ನಗರಗೆರೆ ರಮೇಶ್ ಹೇಳಿದರು. </p>.<p>ಎಚ್ಎನ್ ಗ್ಲೋಬಲ್ ಫೋರಂ ಮೂಲಕ ಹಿಂದುಳಿದ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕೌಶಲ, ಸ್ಪರ್ಧಾತ್ಮಕತೆ ಬೆಳೆಸುವುದು ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ ಫೋರಂ ಸಂಚಾಲಕರಾದ ಆರ್.ಕೆ.ಮಂಜುನಾಥ್, ತಮ್ಮ ಕಾರ್ಯಚಟುವಟಿಕೆಗಳ ನೀಲನಕ್ಷೆಯನ್ನು ಪ್ರಸ್ತುತಪಡಿಸಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಸಿ.ನಾಗರಾಜ್, ಪ್ರಾಧ್ಯಾಪಕ ಎಸ್.ಕೆ.ನಾರಾಯಣ್ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು, ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>