‘ನಿವೇಶನ ಮಾರಿಸಿಕೊಡುವ ಸಂಬಂಧ ಸಂಪರ್ಕಿಸಿದ್ದ ಆರೋಪಿಯು, ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಏ.1 ರಂದು ಸಂತ್ರಸ್ತೆ ನೀಡಿದ್ದ ದೂರಿನ ಅನ್ವಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿನಿಂದನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ನೀಡಿರುವ ದೂರಿನಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಮಧ್ಯೆ, ಮಾರ್ಚ್ನಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರೂ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿ ವಿರುದ್ಧ ಹಾಸನ ನಗರ ಠಾಣೆಗೆ ದೂರು ನೀಡಿದ್ದರು. ಒಟ್ಟಿಗೇ ಎಲ್ಲ ಪ್ರಕರಣಗಳ ವಿಚಾರಣೆ ನಡೆದಿದೆ.