ಅಕ್ರಮ ವಿದೇಶಿ ವಲಸಿಗರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ‘ದಿಗ್ಬಂಧನ ಕೇಂದ್ರ’ದ ವಾಸವನ್ನು ವಿಸ್ತರಿಸಿ ಸಾಮರ್ಥ್ಯ ಹೆಚ್ಚಿಸುವ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಭೆಯಲ್ಲಿ ಪ್ರಸ್ತಾಪಿಸಿದರು. ‘ಅಕ್ರಮ ಬಾಂಗ್ಲಾದೇಶಿ ನಾಗರಿಕರೂ ಸೇರಿದಂತೆ ಇತರ ದೇಶಗಳ ವಲಸಿ ಗರನ್ನು, ಕಾನೂನಿನಂತೆ ಬಂಧಿಸಿ, ಯಾವುದೇ ಕಾರಾಗೃಹಗಳಲ್ಲಿ ಇಡದೆ, ಅವರಿಗೆಂದೇ ಇರುವ ದಿಗ್ಬಂಧನ ಕೇಂದ್ರದಲ್ಲಿ ವಸತಿ ಕಲ್ಪಿಸಬೇಕಿದೆ. ಆದರೆ, ನೆಲಮಂಗಲದಲ್ಲಿ ಮಾತ್ರ ದಿಗ್ಬಂಧನ ಕೇಂದ್ರ ಕಾರ್ಯಾಚರಿಸುತ್ತಿದ್ದು, ಅಲ್ಲಿ ಸ್ಥಳಾವಕಾಶದ ಕೊರತೆ ಇದೆ’ ಎಂದು ಹೇಳಿದರು.