ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಕಟ್ಟಿದ ಬಗ್ಗೆ ಪ್ರತಿಕ್ರಿಯಿಸಿದ ಅವರು,‘ಡಿ.ಕೆ. ಶಿವಕುಮಾರ್ ಅಂಥವರು ಇಂಥ ವಿಷಯದಲ್ಲಿ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಪ್ರಚೋದನಕಾರಿ ಹೇಳಿಕೆಯನ್ನು ನೀಡಬಾರದು. ಜಿಲ್ಲಾಧಿಕಾರಿ ಕಚೇರಿ, ಪಂಚಾಯಿತಿ ಕಚೇರಿ ಮುಂದೆ ಮಾತ್ರ ಧ್ವಜಸ್ತಂಭದಲ್ಲಿ ಮಾತ್ರ ರಾಷ್ಟ್ರಧ್ವಜ ಹಾರಿಸುತ್ತಾರೆ. ಕಾಲೇಜು ಆವರಣದಲ್ಲಿದ್ದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಇರಲಿಲ್ಲ. ಆ ಕಂಬಕ್ಕೆ ಕೆಲವರು ಕೇಸರಿ ಬಾವುಟ ಕಟ್ಟಿದ್ದಾರೆ. ರಾಷ್ಟ್ರ ಧ್ವಜ ಇಳಿಸಿ ಕಟ್ಟಿದ್ದಾರೆ ಎನ್ನುವುದು ತಪ್ಪು ಮಾಹಿತಿ’ ಎಂದರು.