ಭಾರತದಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಚು ನಡೆಯುತ್ತಿದೆ ಎಂಬ ವಿಶ್ವಸಂಸ್ಥೆ ವರದಿಗೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, 'ಕೇರಳ ಹಾಗೂ ಕರ್ನಾಟಕದಲ್ಲಿ ಉಗ್ರರ ಕೃತ್ಯದ ಬಗ್ಗೆ ವರದಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ನಾವು ಎನ್ಐಎ ಜೊತೆ ಕೆಲಸ ಮಾಡುತ್ತಿದ್ದೇವೆ. ಬೆಂಗಳೂರು, ಉಡುಪಿಯಲ್ಲಿ ಈಗಾಗಲೇ ಕೆಲ ಪ್ರಕರಣಗಳನ್ನು ಭೇದಿಸಲಾಗಿದೆ. ಉಗ್ರ ಚಟುವಟಿಕೆ ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ನಮ್ಮ ಪೊಲೀಸರು ತೆಗೆದುಕೊಂಡಿದ್ದಾರೆ' ಎಂದರು.