<p><strong>ವಿಜಯಪುರ: </strong>‘ನಕಲಿ ಲೆಟರ್ಹೆಡ್, ಸಹಿ ಬಳಸಿಕೊಂಡು ನನ್ನ ತೇಜೋವಧೆಯ ಯತ್ನ ನಡೆಸಲಾಗಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಸಿದವರ ವಿರುದ್ಧ ತನಿಖೆ ನಡೆಸಿ, ಕ್ರಮ ಜರುಗಿಸಬೇಕು’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಇಲ್ಲಿನ ಆದರ್ಶ ನಗರದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.</p>.<p>ಪೊಲೀಸ್ ಠಾಣೆಗೆ ತನ್ನ ಬೆಂಬಲಿಗರೊಂದಿಗೆ ಖುದ್ದು ಭೇಟಿ ನೀಡಿ, ಪಿಎಸ್ಐ ರಾಜೇಶ ಲಮಾಣಿ ಅವರಿಗೆ ಗೃಹ ಸಚಿವರು ದೂರು ಸಲ್ಲಿಸಿದರು.</p>.<p>‘ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷರಾಗಿರುವ ಸಚಿವ ಎಂ.ಬಿ.ಪಾಟೀಲ 2017ರ ಜುಲೈ 10ರಂದು ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ‘ಲಿಂಗಾಯತ ಪ್ರತ್ಯೇಕ ಧರ್ಮ’ದ ಕುರಿತಂತೆ ಪತ್ರ ಬರೆದಿದ್ದರುಎಂಬ ಖೊಟ್ಟಿ ಪತ್ರ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.’</p>.<p>‘2018ರ ವಿಧಾನಸಭಾ ಚುನಾವಣೆ ಸಂದರ್ಭವೂ ಈ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿತ್ತು. ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ರಾಜಕೀಯ ದುರುದ್ದೇಶಕ್ಕಾಗಿ ಸುಳ್ಳು ಪತ್ರವನ್ನುಬಳಸಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗೃಹ ಸಚಿವರು ದೂರು ದಾಖಲಿಸಿದ್ದಾರೆ’ ಎಂದು ಆದರ್ಶ ನಗರ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪತ್ರಿಕೆಯೊಂದು ಪ್ರಕಟಿಸಿದ್ದಸುದ್ದಿಯ ತುಣುಕಿನ ಜತೆಗೆ ಗೃಹ ಸಚಿವರು ದೂರು ದಾಖಲಿಸಿದ್ದಾರೆ. ಎಫ್ಐಆರ್ ಮಾಡಿದ್ದೇವೆ. ತನಿಖೆ ನಡೆಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>‘ನಕಲಿ ಲೆಟರ್ಹೆಡ್, ಸಹಿ ಬಳಸಿಕೊಂಡು ನನ್ನ ತೇಜೋವಧೆಯ ಯತ್ನ ನಡೆಸಲಾಗಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಸಿದವರ ವಿರುದ್ಧ ತನಿಖೆ ನಡೆಸಿ, ಕ್ರಮ ಜರುಗಿಸಬೇಕು’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಇಲ್ಲಿನ ಆದರ್ಶ ನಗರದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.</p>.<p>ಪೊಲೀಸ್ ಠಾಣೆಗೆ ತನ್ನ ಬೆಂಬಲಿಗರೊಂದಿಗೆ ಖುದ್ದು ಭೇಟಿ ನೀಡಿ, ಪಿಎಸ್ಐ ರಾಜೇಶ ಲಮಾಣಿ ಅವರಿಗೆ ಗೃಹ ಸಚಿವರು ದೂರು ಸಲ್ಲಿಸಿದರು.</p>.<p>‘ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷರಾಗಿರುವ ಸಚಿವ ಎಂ.ಬಿ.ಪಾಟೀಲ 2017ರ ಜುಲೈ 10ರಂದು ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ‘ಲಿಂಗಾಯತ ಪ್ರತ್ಯೇಕ ಧರ್ಮ’ದ ಕುರಿತಂತೆ ಪತ್ರ ಬರೆದಿದ್ದರುಎಂಬ ಖೊಟ್ಟಿ ಪತ್ರ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.’</p>.<p>‘2018ರ ವಿಧಾನಸಭಾ ಚುನಾವಣೆ ಸಂದರ್ಭವೂ ಈ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿತ್ತು. ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ರಾಜಕೀಯ ದುರುದ್ದೇಶಕ್ಕಾಗಿ ಸುಳ್ಳು ಪತ್ರವನ್ನುಬಳಸಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗೃಹ ಸಚಿವರು ದೂರು ದಾಖಲಿಸಿದ್ದಾರೆ’ ಎಂದು ಆದರ್ಶ ನಗರ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪತ್ರಿಕೆಯೊಂದು ಪ್ರಕಟಿಸಿದ್ದಸುದ್ದಿಯ ತುಣುಕಿನ ಜತೆಗೆ ಗೃಹ ಸಚಿವರು ದೂರು ದಾಖಲಿಸಿದ್ದಾರೆ. ಎಫ್ಐಆರ್ ಮಾಡಿದ್ದೇವೆ. ತನಿಖೆ ನಡೆಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಅಮೃತ್ ನಿಕ್ಕಂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>