‘ನ್ಯಾಯಾಧೀಶರಿಂದ ತನಿಖೆ ಮಾಡಿಸಿ’
‘ಹನಿಟ್ರ್ಯಾಪ್ ಗಂಭೀರ ವಿಚಾರ. ಬೇರೆಲ್ಲ ಪ್ರಕರಣಗಳಿಗೂ ಎಸ್ಐಟಿ ಮಾಡುತ್ತೀರಾ. ಈ ಪ್ರಕರಣ ಬಗ್ಗೆ ನೇರವಾಗಿ ಮಂತ್ರಿಗಳೇ ಹೇಳಿದ್ದಾರೆ. ಅವರಿಂದ ದೂರು ಪಡೆದು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ಇದರಿಂದ ಎಲ್ಲರಿಗೂ ನ್ಯಾಯ ಸಿಗಲಿದೆ’ ಎಂದು ವಿರೋಧ ಪಕ್ಷದ ನಾಯಕ ಅಶೋಕ ಆಗ್ರಹಿಸಿದರು. ‘ಸದನದಲ್ಲಿ ಮಂತ್ರಿಯೊಬ್ಬರು ಹನಿಟ್ರ್ಯಾಪ್ ಬಗ್ಗೆ ಮಾತನಾಡುತ್ತಾರೆಂದರೆ ನಾವು, ನೀವು ಗಂಭೀರವಾಗಿ ತೆಗೆದುಕೊಳ್ಳಬೇಕು. ಎಸ್ಐಟಿ ಮಾಡುತ್ತಿರೊ, ಯಾವ ತನಿಖೆ, ಯಾರ ನೇತೃತ್ವದಲ್ಲಿ ಮಾಡುತ್ತೀರೆಂದು ಸದನದಲ್ಲೇ ತಿಳಿಸಿ’ ಎಂದು ಗೃಹ ಸಚಿವರನ್ನು ಒತ್ತಾಯಿಸಿದರು.