<p><strong>ಮೈಸೂರು:</strong> 'ಪಕ್ಷದೊಳಗೆ ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ' ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. </p><p>ಇಲ್ಲಿ ಶನಿವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ' ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಆದರೆ ಅವರ ಬದಲಾವಣೆ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ವರಿಷ್ಢರು ಅಗತ್ಯ ಇದ್ದಾಗ ಮಾತನಾಡುತ್ತಾರೆ' ಎಂದರು. </p><p>'ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ದರೆ ಶಾಸಕರು ಸಿಎಲ್ ಪಿ ಸಭೆಯಲ್ಲಿ ಹೇಳುತ್ತಿದ್ದರು. ಅಲ್ಲಿ ಯಾರು ಕೂಡ ಈ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲವೂ ಇಲ್ಲ ಎಂದರ್ಥ' ಎಂದರು. </p><p><strong>ಎನ್ ಸಿಬಿ ದ್ವಂದ ಹೇಳಿಕೆ:</strong></p><p>'ಮೈಸೂರಿನಲ್ಲಿ ಯಾವುದೇ ಡ್ರಗ್ಸ್ ಪತ್ತೆ ಆಗಿಲ್ಲ. ಎನ್ ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದಿದೆ. ಆದರೆ ಪತ್ರಿಕಾ ಹೇಳಿಕೆಯಲ್ಲಿ ಸಿಕ್ಕಿದೆ ಎಂದು ಹೇಳಿದೆ. ಯಾಕೆ ಈ ರೀತಿ ದ್ವಂದ ಹೇಳಿಕೆ ನೀಡಿದೆಯೋ ಗೊತ್ತಿಲ್ಲ' ಎಂದರು. </p><p>'ಎನ್ ಸಿಬಿ ದಾಳಿ ನಡೆಸಿದಾಗ ನಮ್ಮ ಪೊಲೀಸರೂ ಜೊತೆಯಲ್ಲಿ ಇದ್ದರು. ಇದರ ಹಿಂದಿನ ಉದ್ದೇಶವನ್ನು ಅವರೇ ಹೇಳಬೇಕು' ಎಂದರು.</p><p>'ರಾಜ್ಯದ ಎಲ್ಲ ಕೆಮಿಕಲ್ ಕಾರ್ಖಾನೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದ್ದೇನೆ' ಎಂದರು. </p>.ಸಿಎಂ ಆಸೆ ಎಲ್ಲರಿಗೂ ಇದೆ; ಕಾಲವೇ ಉತ್ತರಿಸುತ್ತೆ: ಡಿ.ಕೆ. ಶಿವಕುಮಾರ್.ರಾಜ್ಯ ಸರ್ಕಾರದ ಒತ್ತಡಕ್ಕೆ ಮೆಟ್ರೊ ಟಿಕೆಟ್ ದರ ಏರಿಕೆ: ನಿಖಿಲ್ ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> 'ಪಕ್ಷದೊಳಗೆ ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ' ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. </p><p>ಇಲ್ಲಿ ಶನಿವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ' ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಆದರೆ ಅವರ ಬದಲಾವಣೆ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ವರಿಷ್ಢರು ಅಗತ್ಯ ಇದ್ದಾಗ ಮಾತನಾಡುತ್ತಾರೆ' ಎಂದರು. </p><p>'ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ದರೆ ಶಾಸಕರು ಸಿಎಲ್ ಪಿ ಸಭೆಯಲ್ಲಿ ಹೇಳುತ್ತಿದ್ದರು. ಅಲ್ಲಿ ಯಾರು ಕೂಡ ಈ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲವೂ ಇಲ್ಲ ಎಂದರ್ಥ' ಎಂದರು. </p><p><strong>ಎನ್ ಸಿಬಿ ದ್ವಂದ ಹೇಳಿಕೆ:</strong></p><p>'ಮೈಸೂರಿನಲ್ಲಿ ಯಾವುದೇ ಡ್ರಗ್ಸ್ ಪತ್ತೆ ಆಗಿಲ್ಲ. ಎನ್ ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದಿದೆ. ಆದರೆ ಪತ್ರಿಕಾ ಹೇಳಿಕೆಯಲ್ಲಿ ಸಿಕ್ಕಿದೆ ಎಂದು ಹೇಳಿದೆ. ಯಾಕೆ ಈ ರೀತಿ ದ್ವಂದ ಹೇಳಿಕೆ ನೀಡಿದೆಯೋ ಗೊತ್ತಿಲ್ಲ' ಎಂದರು. </p><p>'ಎನ್ ಸಿಬಿ ದಾಳಿ ನಡೆಸಿದಾಗ ನಮ್ಮ ಪೊಲೀಸರೂ ಜೊತೆಯಲ್ಲಿ ಇದ್ದರು. ಇದರ ಹಿಂದಿನ ಉದ್ದೇಶವನ್ನು ಅವರೇ ಹೇಳಬೇಕು' ಎಂದರು.</p><p>'ರಾಜ್ಯದ ಎಲ್ಲ ಕೆಮಿಕಲ್ ಕಾರ್ಖಾನೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದ್ದೇನೆ' ಎಂದರು. </p>.ಸಿಎಂ ಆಸೆ ಎಲ್ಲರಿಗೂ ಇದೆ; ಕಾಲವೇ ಉತ್ತರಿಸುತ್ತೆ: ಡಿ.ಕೆ. ಶಿವಕುಮಾರ್.ರಾಜ್ಯ ಸರ್ಕಾರದ ಒತ್ತಡಕ್ಕೆ ಮೆಟ್ರೊ ಟಿಕೆಟ್ ದರ ಏರಿಕೆ: ನಿಖಿಲ್ ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>