<p>ಹೊನ್ನಾಳಿ: ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದು ಏಕೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ದೃಷ್ಟಿಯಿಂದ ಹಿಜಾಬ್ಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ತಾನು ಮಾಡುತ್ತಿರುವುದೇನು ಎಂದು ಅವಲೋಕಿಸಿಕೊಳ್ಳಬೇಕು’ ಎಂದರು.</p>.<p>ಪ್ರಕರಣ ಸುಪ್ರೀಂ ಕೋರ್ಟ್ನ ಮುಂದಿದ್ದು, ಇನ್ನೂ ಇತ್ಯರ್ಥವಾಗಬೇಕಾಗಿದೆ. ಹೀಗಿರುವಾಗ ಸರ್ಕಾರ ತೆಗೆದುಕೊಂಡ ನಿರ್ಧಾರ ನ್ಯಾಯಾಂಗ ನಿಂದನೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.</p>.<p>ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದಿಂದ ಕಂಗೆಟ್ಟಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಮುಸ್ಲಿಮರು ಪಕ್ಷದಿಂದ ದೂರ ಸರಿಯುತ್ತಾರೆ ಎನ್ನುವ ಕಾರಣಕ್ಕೆ ಈ ಪ್ರಕರಣಕ್ಕೆ ಮರುಜೀವ ನೀಡಿದೆ. ಕುರ್ಚಿ ಕಚ್ಚಾಟದಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಈ ತಂತ್ರ ಉಪಯೋಗಿಸಿದೆ ಎಂದು ಆರೋಪಿಸಿದರು.</p>.<p>‘ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯದಿದ್ದರೆ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಬನ್ನಿ ಎಂದು ಕರೆ ಕೊಡಬೇಕಾಗುತ್ತದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಅರಕೆರೆ ನಾಗರಾಜ್, ಜೆ.ಕೆ. ಸುರೇಶ್, ರಂಗನಾಥ್, ಫಾಲಾಕ್ಷಪ್ಪ, ಓಬಳದಾರ ಬಾಬು, ಮಾರುತಿನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1171343695</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದು ಏಕೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ದೃಷ್ಟಿಯಿಂದ ಹಿಜಾಬ್ಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ತಾನು ಮಾಡುತ್ತಿರುವುದೇನು ಎಂದು ಅವಲೋಕಿಸಿಕೊಳ್ಳಬೇಕು’ ಎಂದರು.</p>.<p>ಪ್ರಕರಣ ಸುಪ್ರೀಂ ಕೋರ್ಟ್ನ ಮುಂದಿದ್ದು, ಇನ್ನೂ ಇತ್ಯರ್ಥವಾಗಬೇಕಾಗಿದೆ. ಹೀಗಿರುವಾಗ ಸರ್ಕಾರ ತೆಗೆದುಕೊಂಡ ನಿರ್ಧಾರ ನ್ಯಾಯಾಂಗ ನಿಂದನೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.</p>.<p>ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದಿಂದ ಕಂಗೆಟ್ಟಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಮುಸ್ಲಿಮರು ಪಕ್ಷದಿಂದ ದೂರ ಸರಿಯುತ್ತಾರೆ ಎನ್ನುವ ಕಾರಣಕ್ಕೆ ಈ ಪ್ರಕರಣಕ್ಕೆ ಮರುಜೀವ ನೀಡಿದೆ. ಕುರ್ಚಿ ಕಚ್ಚಾಟದಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಈ ತಂತ್ರ ಉಪಯೋಗಿಸಿದೆ ಎಂದು ಆರೋಪಿಸಿದರು.</p>.<p>‘ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯದಿದ್ದರೆ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಬನ್ನಿ ಎಂದು ಕರೆ ಕೊಡಬೇಕಾಗುತ್ತದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಅರಕೆರೆ ನಾಗರಾಜ್, ಜೆ.ಕೆ. ಸುರೇಶ್, ರಂಗನಾಥ್, ಫಾಲಾಕ್ಷಪ್ಪ, ಓಬಳದಾರ ಬಾಬು, ಮಾರುತಿನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1171343695</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>