ಸ್ವಾಮೀಜಿ ದೇಶ, ವಿದೇಶಗಳಲ್ಲಿ ಆಶ್ರಮ ಸ್ಥಾಪಿಸಿದ್ದಾರೆ. ಚಿಕಿತ್ಸಕ ಮತ್ತು ಧ್ಯಾನ ಸಂಗೀತದ ಜತೆಗೆ ಪ್ರಾಚೀನ ವೈದಿಕ ಸಂಪ್ರದಾಯ ಉತ್ತೇಜಿಸುವ ಕೆಲಸ ಮಾಡುತ್ತಿದ್ದಾರೆ. ಪೂರ್ವಜರು ನೀಡಿದ ಹಾಡು, ಸಂಗೀತ, ಕಂಠದ ಶಕ್ತಿಯನ್ನು ಜನರ ಆರೋಗ್ಯಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಕುರಿತು ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡಿದ್ದಾರೆ. ಅವರ ಸಾಧನೆ ಗುರುತಿಸಿ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿವೆ ಎಂದು ಶ್ಲಾಘಿಸಿದರು.