ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ.ಸುಶೀಲಮ್ಮ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯ ಪ್ರಚಾರದಲ್ಲಿ ತೊಡಗಿಕೊಂಡಿರುವ ಗುಜರಾತ್ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಮತ್ತು ಬೀದರ್ನ ಗುರುನಾನಕ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರಿಗೆ ರಾಜ್ಯಪಾಲಥಾವರ್ ಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.