<p><strong>ಬೆಂಗಳೂರು</strong>: ಗೂಳಿ ಪಳಗಿಸುವ ‘ಹೋರಿ ಹಬ್ಬ’ ಆಚರಣೆಗೆ ಅನುಮತಿ ನೀಡಿರುವ ಹೈಕೋರ್ಟ್, ‘ಜಲ್ಲಿಕಟ್ಟು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಈ ಸಂಬಂಧ ಹಾವೇರಿ ಜಿಲ್ಲೆಯ ಇಜಾರಿ ಲಕ್ಮಾಪುರದ, ಅಖಿಲ ಕರ್ನಾಟಕ ರೈತರ ಜಾನಪದ ಕ್ರೀಡೆಯ, ‘ಹೋರಿ ಹಬ್ಬ ಹೋರಾಟ ಸಮಿತಿ’ ಅಧ್ಯಕ್ಷ ಬಸವರಾಜ ದ್ಯಾಮಣ್ಣ ಬಂಡಿವಡ್ಡರ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ವಿಲೇವಾರಿ ಮಾಡಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸಂದೀಪ್ ಎಸ್.ಪಾಟೀಲ್ ಅವರ ವಾದ ಮಾನ್ಯ ಮಾಡಿರುವ ನ್ಯಾಯಪೀಠ, ‘ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು’ ಎಂದು ಪೊಲೀಸರು ಮತ್ತು ಹಾವೇರಿ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.</p>.<p>‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ–1960ರ ನಿಬಂಧನೆಗಳ ಅನುಸಾರ ಪ್ರಾಣಿಗಳ ಭಾಗವಹಿಸುವಿಕೆ ಅಥವಾ ಬಳಕೆಯ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತವೆ. ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಅರ್ಜಿದಾರರಿಗೆ ಸ್ಪಷ್ಟಪಡಿಸಿದೆ.</p>.<p><strong>ಹೋರಿ ಹಬ್ಬ:</strong> ಹೋರಿ ಹಬ್ಬ ಅಥವಾ ಹಟ್ಟಿ ಹಬ್ಬವು ಕರ್ನಾಟಕದ ಮುಖ್ಯವಾಗಿ ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ದೀಪಾವಳಿ ಸಮಯದಲ್ಲಿ ನಡೆಯುವ ಸಾಂಪ್ರದಾಯಿಕ ಸಾಹಸಮಯ ಗ್ರಾಮೀಣ ಕ್ರೀಡೆ ಎನಿಸಿದೆ. ಜಲ್ಲಿಕಟ್ಟು ಕ್ರೀಡೆಗೆ ಹೋಲುವ ಈ ಹಬ್ಬದಲ್ಲಿ ಅಲಂಕರಿಸಿದ ಗೂಳಿಗಳನ್ನು ಜನಸಂದಣಿಯ ಮಧ್ಯೆ ಓಡಿಸಲಾಗುತ್ತದೆ. ಗೂಳಿಗಳ ಬೆನ್ನಿಗೆ ಕಟ್ಟಿದ ಬಹುಮಾನಗಳನ್ನು (ಕೊಪ್ಪೆ) ಕಿತ್ತುಕೊಳ್ಳಲು ಯುವಕರು ಪ್ರಯತ್ನಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೂಳಿ ಪಳಗಿಸುವ ‘ಹೋರಿ ಹಬ್ಬ’ ಆಚರಣೆಗೆ ಅನುಮತಿ ನೀಡಿರುವ ಹೈಕೋರ್ಟ್, ‘ಜಲ್ಲಿಕಟ್ಟು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಈ ಸಂಬಂಧ ಹಾವೇರಿ ಜಿಲ್ಲೆಯ ಇಜಾರಿ ಲಕ್ಮಾಪುರದ, ಅಖಿಲ ಕರ್ನಾಟಕ ರೈತರ ಜಾನಪದ ಕ್ರೀಡೆಯ, ‘ಹೋರಿ ಹಬ್ಬ ಹೋರಾಟ ಸಮಿತಿ’ ಅಧ್ಯಕ್ಷ ಬಸವರಾಜ ದ್ಯಾಮಣ್ಣ ಬಂಡಿವಡ್ಡರ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ವಿಲೇವಾರಿ ಮಾಡಿದೆ.</p>.<p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸಂದೀಪ್ ಎಸ್.ಪಾಟೀಲ್ ಅವರ ವಾದ ಮಾನ್ಯ ಮಾಡಿರುವ ನ್ಯಾಯಪೀಠ, ‘ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು’ ಎಂದು ಪೊಲೀಸರು ಮತ್ತು ಹಾವೇರಿ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.</p>.<p>‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ–1960ರ ನಿಬಂಧನೆಗಳ ಅನುಸಾರ ಪ್ರಾಣಿಗಳ ಭಾಗವಹಿಸುವಿಕೆ ಅಥವಾ ಬಳಕೆಯ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಿಗೆ ಒಳಪಟ್ಟಿರುತ್ತವೆ. ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಅರ್ಜಿದಾರರಿಗೆ ಸ್ಪಷ್ಟಪಡಿಸಿದೆ.</p>.<p><strong>ಹೋರಿ ಹಬ್ಬ:</strong> ಹೋರಿ ಹಬ್ಬ ಅಥವಾ ಹಟ್ಟಿ ಹಬ್ಬವು ಕರ್ನಾಟಕದ ಮುಖ್ಯವಾಗಿ ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ದೀಪಾವಳಿ ಸಮಯದಲ್ಲಿ ನಡೆಯುವ ಸಾಂಪ್ರದಾಯಿಕ ಸಾಹಸಮಯ ಗ್ರಾಮೀಣ ಕ್ರೀಡೆ ಎನಿಸಿದೆ. ಜಲ್ಲಿಕಟ್ಟು ಕ್ರೀಡೆಗೆ ಹೋಲುವ ಈ ಹಬ್ಬದಲ್ಲಿ ಅಲಂಕರಿಸಿದ ಗೂಳಿಗಳನ್ನು ಜನಸಂದಣಿಯ ಮಧ್ಯೆ ಓಡಿಸಲಾಗುತ್ತದೆ. ಗೂಳಿಗಳ ಬೆನ್ನಿಗೆ ಕಟ್ಟಿದ ಬಹುಮಾನಗಳನ್ನು (ಕೊಪ್ಪೆ) ಕಿತ್ತುಕೊಳ್ಳಲು ಯುವಕರು ಪ್ರಯತ್ನಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>