<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ವೈದ್ಯಕೀಯ ಆಮ್ಲಜನಕಕ್ಕೆ ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಹೆಚ್ಚುತ್ತಿದ್ದು, ಸಿಲಿಂಡರ್ಗಳನ್ನು ಒದಗಿಸುವಂತೆ ಆಸ್ಪತ್ರೆಗಳ ಮುಖ್ಯಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾರಂಭಿಸಿದ್ದಾರೆ.</p>.<p>ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ) ಮತ್ತೊಮ್ಮೆ ಆಮ್ಲಜನಕದ ಕೊರತೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು, ಸಿಲಿಂಡರ್ಗಳ ಲಭ್ಯತೆಗೆ ಅಗತ್ಯ ವ್ಯವಸ್ಥೆ ಮಾಡಲು ಕೋರಿದೆ.</p>.<p>‘ಆಸ್ಪತ್ರೆಗಳು ಮೂರು ದಿನಗಳಿಗೆ ಆಗುವಷ್ಟು ಆಮ್ಲಜನಕದ ದಾಸ್ತಾನು ಹೊಂದಿರಬೇಕು’ ಎಂಬ ಸರ್ಕಾರದ ಆದೇಶಕ್ಕೆ ಫಾನಾ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಮೇ 3ರಂದು ಹೊರಡಿಸಿದ ಆದೇಶದ ಪ್ರಕಾರ ಪ್ರತಿ ಹಾಸಿಗೆಗೆ 7 ಜಂಬೋ ಸಿಲಿಂಡರ್ಗಳು ಅಗತ್ಯವಿದೆ. ಆದರೆ, ಅದೇ ಆದೇಶದಲ್ಲಿ ಇನ್ನೊಂದೆಡೆ ಪ್ರತಿ ಹಾಸಿಗೆಗೆ 4 ಜಂಬೋ ಸಿಲಿಂಡರ್ಗಳು ಹೊಂದಿರಬೇಕು ಎಂದು ಹೇಳಲಾಗಿದೆ. ಇದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಪ್ರಸನ್ನ ಎಚ್.ಎಂ. ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ವೈದ್ಯಕೀಯ ಆಮ್ಲಜನಕಕ್ಕೆ ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಹೆಚ್ಚುತ್ತಿದ್ದು, ಸಿಲಿಂಡರ್ಗಳನ್ನು ಒದಗಿಸುವಂತೆ ಆಸ್ಪತ್ರೆಗಳ ಮುಖ್ಯಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾರಂಭಿಸಿದ್ದಾರೆ.</p>.<p>ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ) ಮತ್ತೊಮ್ಮೆ ಆಮ್ಲಜನಕದ ಕೊರತೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು, ಸಿಲಿಂಡರ್ಗಳ ಲಭ್ಯತೆಗೆ ಅಗತ್ಯ ವ್ಯವಸ್ಥೆ ಮಾಡಲು ಕೋರಿದೆ.</p>.<p>‘ಆಸ್ಪತ್ರೆಗಳು ಮೂರು ದಿನಗಳಿಗೆ ಆಗುವಷ್ಟು ಆಮ್ಲಜನಕದ ದಾಸ್ತಾನು ಹೊಂದಿರಬೇಕು’ ಎಂಬ ಸರ್ಕಾರದ ಆದೇಶಕ್ಕೆ ಫಾನಾ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಮೇ 3ರಂದು ಹೊರಡಿಸಿದ ಆದೇಶದ ಪ್ರಕಾರ ಪ್ರತಿ ಹಾಸಿಗೆಗೆ 7 ಜಂಬೋ ಸಿಲಿಂಡರ್ಗಳು ಅಗತ್ಯವಿದೆ. ಆದರೆ, ಅದೇ ಆದೇಶದಲ್ಲಿ ಇನ್ನೊಂದೆಡೆ ಪ್ರತಿ ಹಾಸಿಗೆಗೆ 4 ಜಂಬೋ ಸಿಲಿಂಡರ್ಗಳು ಹೊಂದಿರಬೇಕು ಎಂದು ಹೇಳಲಾಗಿದೆ. ಇದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಪ್ರಸನ್ನ ಎಚ್.ಎಂ. ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>