<p><strong>ಬೆಂಗಳೂರು</strong>: ‘ಪ್ರತಿ ಜಿಲ್ಲೆಯಲ್ಲಿ ಮೂರು ವರ್ಷದ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಶೀಘ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭಿಸಲಾಗುವುದು’ ಎಂದರು.</p>.<p>ಸೀಟ್ ಬ್ಲಾಕಿಂಗ್ ಇಲ್ಲ: ‘ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಶೇ 100ರಷ್ಟು ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ಇಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೆರಿಟ್ ಆಧಾರದಲ್ಲಿ ವೈದ್ಯಕೀಯ ಸೀಟು ಹಂಚಿಕೆ ಮಾಡುತ್ತದೆ. 800 ವೈದ್ಯಕೀಯ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>‘ರಾಜ್ಯದಾದ್ಯಂತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭ ಆಗಿದೆ. ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟಿಸಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟಿಸಲಿದ್ದೇವೆ’ ಎಂದರು.</p>.<p>‘ಯುವ ನಿಧಿ ಗ್ಯಾರಂಟಿ ಯೋಜನೆಯಲ್ಲಿ 2.86 ಲಕ್ಷ ಮಂದಿ ನೋಂದಣಿಯಾಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರತಿ ಜಿಲ್ಲೆಯಲ್ಲಿ ಮೂರು ವರ್ಷದ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಶೀಘ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭಿಸಲಾಗುವುದು’ ಎಂದರು.</p>.<p>ಸೀಟ್ ಬ್ಲಾಕಿಂಗ್ ಇಲ್ಲ: ‘ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಶೇ 100ರಷ್ಟು ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ಇಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೆರಿಟ್ ಆಧಾರದಲ್ಲಿ ವೈದ್ಯಕೀಯ ಸೀಟು ಹಂಚಿಕೆ ಮಾಡುತ್ತದೆ. 800 ವೈದ್ಯಕೀಯ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>‘ರಾಜ್ಯದಾದ್ಯಂತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭ ಆಗಿದೆ. ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟಿಸಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟಿಸಲಿದ್ದೇವೆ’ ಎಂದರು.</p>.<p>‘ಯುವ ನಿಧಿ ಗ್ಯಾರಂಟಿ ಯೋಜನೆಯಲ್ಲಿ 2.86 ಲಕ್ಷ ಮಂದಿ ನೋಂದಣಿಯಾಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>