ಶಿರಸಿ: ಅನಾರೋಗ್ಯದಿಂದ ಬಳಲುತ್ತಿರುವ ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸೋಂದಾ ಹಳೆಯೂರಿನ ಶ್ರೀಪಾದ ಜೋಶಿಯವರ ಮನೆಯಲ್ಲಿ ಭಾಗವತರಿಗೆ ಆರೈಕೆ ಮಾಡಲಾಗುತ್ತಿದೆ. ವೈದ್ಯರು ನಿತ್ಯ ಭೇಟಿ ನೀಡಿ, ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ.
ಯಕ್ಷಗಾನವೇ ಬದುಕಾಗಿರುವ ಭಾಗವತರ ‘ಯಕ್ಷಗಾನ–ಶಿಕ್ಷಣ–ಲಕ್ಷಣ’ ಕೃತಿ ಡಿ.8ರಂದು ತಾಲ್ಲೂಕಿನ ಕೆರೆಕೊಪ್ಪದಲ್ಲಿ ಬಿಡುಗಡೆಯಾಗಿತ್ತು. ಅನಾರೋಗ್ಯದ ನಡುವೆಯೂ ಭಾಗವತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದರು.