<p><strong>ಬೆಂಗಳೂರು:</strong> ಹೊಸೂರು-ಮೈಸೂರು ಮತ್ತು ತುಮಕೂರು ರಸ್ತೆ ನಡುವೆ ಸಂಪರ್ಕ ಕಲ್ಪಿಸುವ ಪೆರಿಫೆರಲ್ ರಿಂಗ್ ರಸ್ತೆ-2ರ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.</p>.<p>ಈ ಸಂಬಂಧ ಕೆಂಗೇರಿ ಹೋಬಳಿಯ ಎಂ.ವನಿತಾ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಿಡಿಎ, 2011ರಲ್ಲಿ ಹೊರಡಿಸಿದ್ದ ಪ್ರಾಥಮಿಕ ಹಾಗೂ 2013ರಲ್ಲಿ ಪ್ರಕಟಿಸಿದ್ದ ಅಂತಿಮ ಅಧಿಸೂಚನೆ<br>ಗಳನ್ನು ಊರ್ಜಿತಗೊಳಿಸಿದೆ.</p>.<p>‘ಒಂದು ವೇಳೆ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಂಡಿಲ್ಲ ಎಂದಾದರೆ ಕೂಡಲೇ ಸ್ವಾಧೀನಕ್ಕೆ ಪಡೆದು<br>ಕೊಳ್ಳಬೇಕು ಮತ್ತು ಆರು ತಿಂಗಳಲ್ಲಿ ಪರಿಹಾರ ಘೋಷಿಸಬೇಕು’ ಎಂದು ಬಿಡಿಎಗೆ ನಿರ್ದೇಶಿಸಿರುವ ನ್ಯಾಯಪೀಠ, ‘ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಬಾಕಿ ಇರುವ ಟ್ರಕ್ ಟರ್ಮಿನಲ್, ಸ್ಕೈ ವಾಕ್, ಬಸ್ ಡಿಪೊ ಮತ್ತಿತರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಹೇಳಿದೆ.</p>.<p>‘ಬಿಡಿಎ ರಸ್ತೆ ಅಭಿವೃದ್ಧಿ ಯೋಜನೆಯಲ್ಲಿ ಮಾರ್ಗ ಬದಲಾವಣೆ ಮಾಡಿದೆ’ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ‘ಈಗಾಗಲೇ ಪೆರಿಫೆರಲ್ ರಿಂಗ್ ರಸ್ತೆ ಭಾಗ-2ರಲ್ಲಿ ಬಿಡಿಎ ಶೇ 80ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಸಾರ್ವಜನಿಕರು ಹಾಗೂ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲ<br>ವಾಗುವಂತೆ ಮೆಟ್ರೊ ನಿಲ್ದಾಣ, ಸರ್ವೀಸ್ ರಸ್ತೆ ನಿರ್ಮಾಣ ಮತ್ತಿತರ ಕಾಮಗಾರಿ ಗಳನ್ನು ಕೈಗೊಳ್ಳಬೇಕಿದೆ. ಹಾಗಾಗಿ, ಈ ಹಂತದಲ್ಲಿ ಭೂ ಸ್ವಾಧೀನ <br>ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡ<br>ಲಾಗದು’ ಎಂದು ವಿವರಿಸಿದೆ.</p>.<p><strong>ಅರ್ಜಿದಾರರ ಕೋರಿಕೆ ಏನಿತ್ತು?:</strong> </p><p>‘ಅಧಿಸೂಚನೆ ಬಿಡಿಎ ಕಾಯ್ದೆ-1976ರ ಕಲಂ 36 (3)ಕ್ಕೆ ವಿರುದ್ಧವಾಗಿದೆ. ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯ ಮಧ್ಯೆ ಸಾಕಷ್ಟು ಅಂತರವಿದೆ. ಅಂತೆಯೇ, ಭೂ ಮಾಲೀಕರಿಗೆ ಈತನಕ ಪರಿಹಾರ ಪ್ರಕಟಿಸಿಲ್ಲ. ಹಾಗಾಗಿ, ಅಧಿಸೂಚನೆಗಳನ್ನು ರದ್ದು ಗೊಳಿಸಬೇಕು’ ಎಂದು ಕೋರಿದ್ದರು.</p>.<p><strong>ಬಿಡಿಎ ಪ್ರತಿವಾದ ಏನಿತ್ತು?:</strong> </p><p>‘ಪರಿಹಾರದ ನೋಟಿಸ್ಗಳನ್ನು ಈಗಾಗಲೇ ಭೂ ಮಾಲೀಕರಿಗೆ ನೀಡಲಾಗಿದೆ. ಕೆಲವು ಭೂ ಮಾಲೀಕರ ಜಮೀನಿನ ಮಹಜರು ನಡೆಸಿ ಎಂಜಿನಿಯರಿಂಗ್ ವಿಭಾಗಕ್ಕೆ ಜಮೀನು ಹಸ್ತಾಂತರ ಮಾಡಲಾಗಿದೆ. <br>ಕರ್ನಾಟಕ ನಗರ ಮತ್ತು ಪಟ್ಟಣ ಯೋಜನಾ ಕಾಯ್ದೆ–1961ರ ಪ್ರಕಾರ ರಸ್ತೆ ನಿರ್ಮಾಣ ಯೋಜನೆ ರದ್ದಾಗಿಲ್ಲ. ಒಟ್ಟು 10.35 ಕಿ.ಮೀ. ಪ್ರಮುಖ ರಸ್ತೆ ನಿರ್ಮಿಸಬೇಕಿತ್ತು. ಅದರಲ್ಲಿ 8.53 ಕಿ.ಮೀ. ರಸ್ತೆ ನಿರ್ಮಿಸಲಾಗಿದೆ. </p><p><br>ಉಳಿದ 1.8 ಕಿ.ಮೀ. ರಸ್ತೆ ಕಾಮಗಾರಿ ಮಾತ್ರ ಬಾಕಿ ಇದೆ. ಹಾಗಾಗಿ, ಅರ್ಜಿಗಳನ್ನು ವಜಾಗೊಳಿಸಬೇಕು’ ಎಂದು ಬಿಡಿಎ ನ್ಯಾಯಪೀಠಕ್ಕೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸೂರು-ಮೈಸೂರು ಮತ್ತು ತುಮಕೂರು ರಸ್ತೆ ನಡುವೆ ಸಂಪರ್ಕ ಕಲ್ಪಿಸುವ ಪೆರಿಫೆರಲ್ ರಿಂಗ್ ರಸ್ತೆ-2ರ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.</p>.<p>ಈ ಸಂಬಂಧ ಕೆಂಗೇರಿ ಹೋಬಳಿಯ ಎಂ.ವನಿತಾ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಿಡಿಎ, 2011ರಲ್ಲಿ ಹೊರಡಿಸಿದ್ದ ಪ್ರಾಥಮಿಕ ಹಾಗೂ 2013ರಲ್ಲಿ ಪ್ರಕಟಿಸಿದ್ದ ಅಂತಿಮ ಅಧಿಸೂಚನೆ<br>ಗಳನ್ನು ಊರ್ಜಿತಗೊಳಿಸಿದೆ.</p>.<p>‘ಒಂದು ವೇಳೆ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಂಡಿಲ್ಲ ಎಂದಾದರೆ ಕೂಡಲೇ ಸ್ವಾಧೀನಕ್ಕೆ ಪಡೆದು<br>ಕೊಳ್ಳಬೇಕು ಮತ್ತು ಆರು ತಿಂಗಳಲ್ಲಿ ಪರಿಹಾರ ಘೋಷಿಸಬೇಕು’ ಎಂದು ಬಿಡಿಎಗೆ ನಿರ್ದೇಶಿಸಿರುವ ನ್ಯಾಯಪೀಠ, ‘ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಬಾಕಿ ಇರುವ ಟ್ರಕ್ ಟರ್ಮಿನಲ್, ಸ್ಕೈ ವಾಕ್, ಬಸ್ ಡಿಪೊ ಮತ್ತಿತರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಹೇಳಿದೆ.</p>.<p>‘ಬಿಡಿಎ ರಸ್ತೆ ಅಭಿವೃದ್ಧಿ ಯೋಜನೆಯಲ್ಲಿ ಮಾರ್ಗ ಬದಲಾವಣೆ ಮಾಡಿದೆ’ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ‘ಈಗಾಗಲೇ ಪೆರಿಫೆರಲ್ ರಿಂಗ್ ರಸ್ತೆ ಭಾಗ-2ರಲ್ಲಿ ಬಿಡಿಎ ಶೇ 80ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಸಾರ್ವಜನಿಕರು ಹಾಗೂ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲ<br>ವಾಗುವಂತೆ ಮೆಟ್ರೊ ನಿಲ್ದಾಣ, ಸರ್ವೀಸ್ ರಸ್ತೆ ನಿರ್ಮಾಣ ಮತ್ತಿತರ ಕಾಮಗಾರಿ ಗಳನ್ನು ಕೈಗೊಳ್ಳಬೇಕಿದೆ. ಹಾಗಾಗಿ, ಈ ಹಂತದಲ್ಲಿ ಭೂ ಸ್ವಾಧೀನ <br>ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡ<br>ಲಾಗದು’ ಎಂದು ವಿವರಿಸಿದೆ.</p>.<p><strong>ಅರ್ಜಿದಾರರ ಕೋರಿಕೆ ಏನಿತ್ತು?:</strong> </p><p>‘ಅಧಿಸೂಚನೆ ಬಿಡಿಎ ಕಾಯ್ದೆ-1976ರ ಕಲಂ 36 (3)ಕ್ಕೆ ವಿರುದ್ಧವಾಗಿದೆ. ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯ ಮಧ್ಯೆ ಸಾಕಷ್ಟು ಅಂತರವಿದೆ. ಅಂತೆಯೇ, ಭೂ ಮಾಲೀಕರಿಗೆ ಈತನಕ ಪರಿಹಾರ ಪ್ರಕಟಿಸಿಲ್ಲ. ಹಾಗಾಗಿ, ಅಧಿಸೂಚನೆಗಳನ್ನು ರದ್ದು ಗೊಳಿಸಬೇಕು’ ಎಂದು ಕೋರಿದ್ದರು.</p>.<p><strong>ಬಿಡಿಎ ಪ್ರತಿವಾದ ಏನಿತ್ತು?:</strong> </p><p>‘ಪರಿಹಾರದ ನೋಟಿಸ್ಗಳನ್ನು ಈಗಾಗಲೇ ಭೂ ಮಾಲೀಕರಿಗೆ ನೀಡಲಾಗಿದೆ. ಕೆಲವು ಭೂ ಮಾಲೀಕರ ಜಮೀನಿನ ಮಹಜರು ನಡೆಸಿ ಎಂಜಿನಿಯರಿಂಗ್ ವಿಭಾಗಕ್ಕೆ ಜಮೀನು ಹಸ್ತಾಂತರ ಮಾಡಲಾಗಿದೆ. <br>ಕರ್ನಾಟಕ ನಗರ ಮತ್ತು ಪಟ್ಟಣ ಯೋಜನಾ ಕಾಯ್ದೆ–1961ರ ಪ್ರಕಾರ ರಸ್ತೆ ನಿರ್ಮಾಣ ಯೋಜನೆ ರದ್ದಾಗಿಲ್ಲ. ಒಟ್ಟು 10.35 ಕಿ.ಮೀ. ಪ್ರಮುಖ ರಸ್ತೆ ನಿರ್ಮಿಸಬೇಕಿತ್ತು. ಅದರಲ್ಲಿ 8.53 ಕಿ.ಮೀ. ರಸ್ತೆ ನಿರ್ಮಿಸಲಾಗಿದೆ. </p><p><br>ಉಳಿದ 1.8 ಕಿ.ಮೀ. ರಸ್ತೆ ಕಾಮಗಾರಿ ಮಾತ್ರ ಬಾಕಿ ಇದೆ. ಹಾಗಾಗಿ, ಅರ್ಜಿಗಳನ್ನು ವಜಾಗೊಳಿಸಬೇಕು’ ಎಂದು ಬಿಡಿಎ ನ್ಯಾಯಪೀಠಕ್ಕೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>