ನರ್ಸಿಂಗ್ ಕಾಲೇಜುಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ 2021ರಲ್ಲಿ ನಡೆದ ವಿಧಾನಮಂಡಲ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಜಂಟಿ ಸದನ ಸಮಿತಿ ರಚಿಸುವಂತೆ ಜೆಡಿಎಸ್ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಜಂಟಿ ಸದನ ಸಮಿತಿ ರಚಿಸಲು ಒಪ್ಪಿಗೆ ನೀಡಿದ್ದರು.