<p>ಬೆಂಗಳೂರು: ರಾಜೀವ್ಗಾಂಧಿ ವಸತಿ ನಿಗಮದ ವಸತಿ ಯೋಜನೆಯಡಿ 52 ಸಾವಿರ ಮನೆಗಳ ಪೈಕಿ 11,400 ಮನೆಗಳನ್ನು ಆದಷ್ಟು ಬೇಗ ಹಂಚಿಕೆ ಮಾಡಬೇಕು ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು.</p>.<p>ರಾಜೀವ್ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಆವಾಸ್ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿಗಳಿಗೆ ವೇಗ ನೀಡಬೇಕು. ವಸತಿ ಸಮುಚ್ಛಯ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>‘ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನಮಂತ್ರಿ ಆವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭವಿಗಳ ಆಯ್ಕೆ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ. ಸಹಾಯಧನ ಮೊತ್ತ ಸಕಾಲಕ್ಕೆ ತಲುಪುವಂತೆ ನೋಡಿಕೊಳ್ಳಿ’ ಎಂದು ಅವರು ತಿಳಿಸಿದರು.</p>.<p>ಬೆಂಗಳೂರು ನಗರದಲ್ಲಿ ರೂಪಿಸಿರುವ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಫಲಾನುಭವಿಗಳು ಕೆಲವು ವರ್ಷಗಳಿಂದ ಕಾಯುತ್ತಿದ್ದು ಶೀಘ್ರ ಹಂಚಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಸೂಚನೆ ನೀಡಿದರು.</p>.<p>ಪ್ರಧಾನಮಂತ್ರಿ ನಗರ ಮತ್ತು ಗ್ರಾಮೀಣ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದ ಪಾಲುದಾರಿಕೆ ಇರುವುದರಿಂದ ಹೆಚ್ಚಿನ ಅನುದಾನ ಪಡೆಯಲು ಸದ್ಯದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಜಮೀರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜೀವ್ಗಾಂಧಿ ವಸತಿ ನಿಗಮದ ವಸತಿ ಯೋಜನೆಯಡಿ 52 ಸಾವಿರ ಮನೆಗಳ ಪೈಕಿ 11,400 ಮನೆಗಳನ್ನು ಆದಷ್ಟು ಬೇಗ ಹಂಚಿಕೆ ಮಾಡಬೇಕು ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು.</p>.<p>ರಾಜೀವ್ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಆವಾಸ್ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿಗಳಿಗೆ ವೇಗ ನೀಡಬೇಕು. ವಸತಿ ಸಮುಚ್ಛಯ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>‘ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನಮಂತ್ರಿ ಆವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭವಿಗಳ ಆಯ್ಕೆ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ. ಸಹಾಯಧನ ಮೊತ್ತ ಸಕಾಲಕ್ಕೆ ತಲುಪುವಂತೆ ನೋಡಿಕೊಳ್ಳಿ’ ಎಂದು ಅವರು ತಿಳಿಸಿದರು.</p>.<p>ಬೆಂಗಳೂರು ನಗರದಲ್ಲಿ ರೂಪಿಸಿರುವ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಫಲಾನುಭವಿಗಳು ಕೆಲವು ವರ್ಷಗಳಿಂದ ಕಾಯುತ್ತಿದ್ದು ಶೀಘ್ರ ಹಂಚಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದೂ ಸೂಚನೆ ನೀಡಿದರು.</p>.<p>ಪ್ರಧಾನಮಂತ್ರಿ ನಗರ ಮತ್ತು ಗ್ರಾಮೀಣ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದ ಪಾಲುದಾರಿಕೆ ಇರುವುದರಿಂದ ಹೆಚ್ಚಿನ ಅನುದಾನ ಪಡೆಯಲು ಸದ್ಯದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಜಮೀರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>