ಕಲಬುರ್ಗಿ: ‘ಪ್ರಾದೇಶಿಕ ಅಸಮತೋಲನೆಯ ಕಾರಣಕ್ಕೆ ಪ್ರತ್ಯೇಕ ರಾಜ್ಯದ ಕೂಗು ಸಲ್ಲದು. ಅಖಂಡ ಕರ್ನಾಟಕ ರಚನೆಗಾಗಿ ಹತ್ತಾರು ವರ್ಷ ಹೋರಾಟ ಮಾಡಿದ್ದೇವೆ. ಇದನ್ನು ಉಳಿಸಿಕೊಂಡು, ಕನ್ನಡತನ ಬೆಳೆಸಿಕೊಂಡು ಹೋಗಬೇಕು. ಪ್ರಾದೇಶಿಕ ಅಸಮತೋಲನ ಹೊಡೆದೋಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅಭಿಪ್ರಾಯಪಟ್ಟರು.