ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಪಕ್ಷ, ಈ ಘಟನೆ ಆಘಾತಕಾರಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ. ಕಾಂಗ್ರೆಸ್ನ ಅತಿಯಾದ ತುಷ್ಟೀಕರಣದಿಂದ ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮು ಸಿಕ್ಕಂತೆ ಆಗಿದೆ. ಕೆಲವರಿಗೆ ಈ ನೆಲದ ಕಾನೂನು ಅನ್ವಯ ಆಗುತ್ತಿಲ್ಲ ಎಂಬ ಅನುಮಾನ ಕಾಡುತ್ತಿದೆ ಎಂದು ಟೀಕಿಸಿದೆ.