<p>ಹುಬ್ಬಳ್ಳಿ: ‘ವೀರಶೈವ, ಲಿಂಗಾಯತ ಒಂದೇ. ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯಲು ಹೊರಟಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ವೀರಶೈವ ಲಿಂಗಾಯತ ಸೇವಾ ಸಮಿತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮಾಜ ಸೇರ್ಪಡೆಯಾದರೆ ಸಮಾಜದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ಸಿಗಲಿವೆ. ಈ ನಿಟ್ಟಿನಲ್ಲಿ ರಾಜ್ಯ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಆಗಬೇಕು’ ಎಂದರು.</p>.<p>‘ಒಗ್ಗಟ್ಟು ಒಡೆಯುವ ಮೂಲಕ ಸಮಾಜದ ಮುಖಂಡರನ್ನು ಮುಗಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಜಾಗರೂಕರಾಗಿರಬೇಕು. ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜದವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಚಿಂತನೆ ನಡೆಸಬೇಕು’ ಎಂದರು.</p>.<p>‘ಬಸವಣ್ಣನವರು ವೀರಶೈವ ಲಿಂಗಾಯತ ಸಮಾಜದ ಆದರ್ಶಪ್ರಾಯವಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕು’ ಎಂದು ಹೇಳಿದರು.</p>.<p>ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ‘ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜ ಸಾಗುತ್ತಿದೆ. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ, ಉನ್ನತ ಸ್ಥಾನಕ್ಕೇರಬೇಕು. ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಬೇಕು’ ಎಂದರು.</p>.<p>ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ದೀಪಾ ಗೌರಿ, ತಾರಾದೇವಿ ವಾಲಿ, ಗಿರೀಶ ಪಟ್ಟಣಶೆಟ್ಟಿ, ಎಸ್.ಎಂ.ಶಿವಳ್ಳಿಮಠ, ಮಲ್ಲಿಕಾರ್ಜುನ ರಡ್ಡೇರ, ಶಂಕರ ಕೋಳಿವಾಡ ಇದ್ದರು.</p>.<p>ವೀರಶೈವ ಲಿಂಗಾಯತ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಸಾವುಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-2033773135</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ವೀರಶೈವ, ಲಿಂಗಾಯತ ಒಂದೇ. ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯಲು ಹೊರಟಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ವೀರಶೈವ ಲಿಂಗಾಯತ ಸೇವಾ ಸಮಿತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮಾಜ ಸೇರ್ಪಡೆಯಾದರೆ ಸಮಾಜದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ಸಿಗಲಿವೆ. ಈ ನಿಟ್ಟಿನಲ್ಲಿ ರಾಜ್ಯ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಆಗಬೇಕು’ ಎಂದರು.</p>.<p>‘ಒಗ್ಗಟ್ಟು ಒಡೆಯುವ ಮೂಲಕ ಸಮಾಜದ ಮುಖಂಡರನ್ನು ಮುಗಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಜಾಗರೂಕರಾಗಿರಬೇಕು. ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜದವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಚಿಂತನೆ ನಡೆಸಬೇಕು’ ಎಂದರು.</p>.<p>‘ಬಸವಣ್ಣನವರು ವೀರಶೈವ ಲಿಂಗಾಯತ ಸಮಾಜದ ಆದರ್ಶಪ್ರಾಯವಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕು’ ಎಂದು ಹೇಳಿದರು.</p>.<p>ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ‘ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜ ಸಾಗುತ್ತಿದೆ. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ, ಉನ್ನತ ಸ್ಥಾನಕ್ಕೇರಬೇಕು. ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಬೇಕು’ ಎಂದರು.</p>.<p>ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ದೀಪಾ ಗೌರಿ, ತಾರಾದೇವಿ ವಾಲಿ, ಗಿರೀಶ ಪಟ್ಟಣಶೆಟ್ಟಿ, ಎಸ್.ಎಂ.ಶಿವಳ್ಳಿಮಠ, ಮಲ್ಲಿಕಾರ್ಜುನ ರಡ್ಡೇರ, ಶಂಕರ ಕೋಳಿವಾಡ ಇದ್ದರು.</p>.<p>ವೀರಶೈವ ಲಿಂಗಾಯತ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಸಾವುಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-20-2033773135</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>