<p><strong>ಬೆಂಗಳೂರು:</strong> ‘ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆಗೆ ಕಾರಣರಾದ ಇನ್ಸ್ಪೆಕ್ಟರ್ ಮತ್ತು ಇತರ ಪೊಲೀಸರನ್ನು ಶುಕ್ರವಾರ (ಜ. 9) ಬೆಳಿಗ್ಗೆ 10 ಗಂಟೆಯ ಒಳಗೆ ಅಮಾನತು ಮಾಡಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಗಡುವು ವಿಧಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಈ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಘಟನೆಗೆ ಮಹಿಳಾ ಆಯೋಗ ಈಗಾಗಲೇ ಛೀಮಾರಿ ಹಾಕಿದೆ. ಮಾನವ ಹಕ್ಕು ಆಯೋಗ ಹಾಗೂ ಮಹಿಳಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ’ ಎಂದರು.</p>.<p>‘ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ಪೂರ್ವಯೋಜಿತ, ರಾಜಕೀಯ ಪ್ರೇರಿತ ಕೃತ್ಯ. ಈ ಘಟನೆಯಿಂದ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಮೇಲೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರೇ ದುಶ್ಯಾಸನರಾಗಿದ್ದಾರೆ’ ಎಂದರು.</p>.<p>‘ಈ ಘಟನೆಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಡಾಗಿದ್ದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದಾರೆ. ಪೊಲೀಸರು ದುಶ್ಯಾಸನನಂತೆ ವಿವಸ್ತ್ರ ಮಾಡಿದ್ದಾರೆ. ಇದು ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಈ ಪ್ರಕರಣವನ್ನು ಮುಚ್ಚಿ ಹಾಕಲು ಷಡ್ಯಂತ್ರ ನಡೆದಿದೆ’ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆಗೆ ಕಾರಣರಾದ ಇನ್ಸ್ಪೆಕ್ಟರ್ ಮತ್ತು ಇತರ ಪೊಲೀಸರನ್ನು ಶುಕ್ರವಾರ (ಜ. 9) ಬೆಳಿಗ್ಗೆ 10 ಗಂಟೆಯ ಒಳಗೆ ಅಮಾನತು ಮಾಡಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಗಡುವು ವಿಧಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಈ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಘಟನೆಗೆ ಮಹಿಳಾ ಆಯೋಗ ಈಗಾಗಲೇ ಛೀಮಾರಿ ಹಾಕಿದೆ. ಮಾನವ ಹಕ್ಕು ಆಯೋಗ ಹಾಗೂ ಮಹಿಳಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ’ ಎಂದರು.</p>.<p>‘ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ಪೂರ್ವಯೋಜಿತ, ರಾಜಕೀಯ ಪ್ರೇರಿತ ಕೃತ್ಯ. ಈ ಘಟನೆಯಿಂದ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಮೇಲೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರೇ ದುಶ್ಯಾಸನರಾಗಿದ್ದಾರೆ’ ಎಂದರು.</p>.<p>‘ಈ ಘಟನೆಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರುಡಾಗಿದ್ದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದಾರೆ. ಪೊಲೀಸರು ದುಶ್ಯಾಸನನಂತೆ ವಿವಸ್ತ್ರ ಮಾಡಿದ್ದಾರೆ. ಇದು ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಈ ಪ್ರಕರಣವನ್ನು ಮುಚ್ಚಿ ಹಾಕಲು ಷಡ್ಯಂತ್ರ ನಡೆದಿದೆ’ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>