ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ, ‘ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಿಸಿದ ರೀತಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂದೇಶ್ ಖಾಲಿ ಪ್ರಕರಣವನ್ನು ನಿರ್ವಹಿಸಿದ ರೀತಿ ಒಂದೇ ತೆರನಾದುದು’ ಎಂದರು.