ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿ, ‘ಬಾರ್ಗಳಲ್ಲಿ ಎಲ್ಲೆಡೆ ಹುಕ್ಕಾ ಸೇವನೆಗೆ ಅವಕಾಶ ನೀಡಲಾಗುತ್ತಿತ್ತು. ಇವುಗಳಿಗೆ ಪ್ರತ್ಯೇಕ ಪ್ರದೇಶವನ್ನು ನಿಗದಿ ಮಾಡಿರಲಿಲ್ಲ. ಹಾಗಾಗಿ, ಇದು ಹುಕ್ಕಾ ಸೇವನೆ ಮಾಡುವವರು ಮಾತ್ರವಲ್ಲದೆ, ಇತರರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿತ್ತು. ಹೀಗಾಗಿ, ಸರ್ಕಾರ ಸಂವಿಧಾನದ 47ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರ ಚಲಾಯಿಸಿದೆ’ ಎಂದು ತಿಳಿಸಿದರು.