ಲೋಕಾಯುಕ್ತರು ಆಗಮಿಸುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಘಟನೆಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲಿದ್ದರು. ಆಗ ಬಿಬಿಎಂಪಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಲೋಕಾಯುಕ್ತರು,ನಿಮ್ಮಕೆಲಸ ನೀವು ಸರಿಯಾಗಿ ಮಾಡದಿದ್ದರೆ ನನ್ನ ಕೆಲಸವನ್ನು ನಾನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.