<p><strong>ನವದೆಹಲಿ:</strong> ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಡಿಗಡಿಗೆ ಲಂಚ ಕೇಳಿರುವ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಎರಡು ವಾರಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. </p>.<p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗವು, ‘ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಮಾನವೀಯತೆಗೆ ಈ ಘಟನೆ ಸಾಕ್ಷಿ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಹೇಳಿದೆ. </p>.<p>ಪುತ್ರಿಯ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ನಡೆಸಲು ಪಟ್ಟ ಸಂಕಷ್ಟ ಹಾಗೂ ಆಂಬುಲೆನ್ಸ್ ಚಾಲಕ, ಪೊಲೀಸರು, ಸ್ಮಶಾನದ ಸಿಬ್ಬಂದಿ<br>ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಂದ ಅನುಭವಿಸಿದ ನೋವು ಹಾಗೂ ಸಿಬ್ಬಂದಿ ಹಣಕ್ಕೆ ಬೇಡಿಕೆಯಿಟ್ಟ ಬಗೆಯನ್ನು ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಕೆ.ಶಿವಕುಮಾರ್ ಅವರು ‘ಲಿಂಕ್ಡ್ಇನ್’ನಲ್ಲಿ ಹೇಳಿಕೊಂಡಿದ್ದರು. </p>.<p>ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಡಿಗಡಿಗೂ ಲಂಚ ಕೇಳಿದ ಸಂಗತಿಯನ್ನು ಕೇಂದ್ರ ಸರ್ಕಾರದ ಸ್ವಾಮ್ಯದ ಕಂಪನಿಯಲ್ಲಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಆಗಿದ್ದ ಶಿವಕುಮಾರ್ ಅವರು ನೋವಿನಿಂದ ಹೇಳಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಡಿಗಡಿಗೆ ಲಂಚ ಕೇಳಿರುವ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಎರಡು ವಾರಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. </p>.<p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗವು, ‘ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಮಾನವೀಯತೆಗೆ ಈ ಘಟನೆ ಸಾಕ್ಷಿ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಹೇಳಿದೆ. </p>.<p>ಪುತ್ರಿಯ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ನಡೆಸಲು ಪಟ್ಟ ಸಂಕಷ್ಟ ಹಾಗೂ ಆಂಬುಲೆನ್ಸ್ ಚಾಲಕ, ಪೊಲೀಸರು, ಸ್ಮಶಾನದ ಸಿಬ್ಬಂದಿ<br>ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಂದ ಅನುಭವಿಸಿದ ನೋವು ಹಾಗೂ ಸಿಬ್ಬಂದಿ ಹಣಕ್ಕೆ ಬೇಡಿಕೆಯಿಟ್ಟ ಬಗೆಯನ್ನು ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಕೆ.ಶಿವಕುಮಾರ್ ಅವರು ‘ಲಿಂಕ್ಡ್ಇನ್’ನಲ್ಲಿ ಹೇಳಿಕೊಂಡಿದ್ದರು. </p>.<p>ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಡಿಗಡಿಗೂ ಲಂಚ ಕೇಳಿದ ಸಂಗತಿಯನ್ನು ಕೇಂದ್ರ ಸರ್ಕಾರದ ಸ್ವಾಮ್ಯದ ಕಂಪನಿಯಲ್ಲಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಆಗಿದ್ದ ಶಿವಕುಮಾರ್ ಅವರು ನೋವಿನಿಂದ ಹೇಳಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>