<p><strong>ಬೆಂಗಳೂರು: </strong>ರಾಜ್ಯ ರಾಜಧಾನಿ ಬೆಂಗಳೂರಿನ ಶ್ರೀನಗರದಲ್ಲಿ ನಾಗರಿಕರು ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿ ಮುಂದೆ ನೂರಾರು ಮೀಟರ್ನಷ್ಟು ದೂರ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಕೋವಿಡ್-19 ಸೋಂಕು ಪ್ರಕರಣಗಳ ಏರಿಕೆಯಿಂದಾಗಿ ಸರ್ಕಾರವು ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿದೆ.</p>.<p>ಲಾಕ್ಡೌನ್ ಆದೇಶವು ಮೇ 10ರಿಂದ ಮೇ 24 ರವರೆಗೆ ಜಾರಿಯಲ್ಲಿರಲಿದ್ದು, ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.</p>.<p>ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಆಹಾರ ಇಲಾಖೆಯು ಇದನ್ನು ಗಮನದಲ್ಲಿರಿಸಿ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿದಾರರ ಆರೋಗ್ಯ ಹಿತರಕ್ಷಣೆ ದೃಷ್ಟಿಯಿಂದ ಬಯೋಮೆಟ್ರಿಕ್ ಪಡೆಯದೆ ಆಹಾರಧಾನ್ಯ ವಿತರಿಸುವಂತೆ ನ್ಯಾಯ ಬೆಲೆ ಅಂಗಡಿದಾರರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>