ಸತ್ಯಾಗ್ರಹದಲ್ಲಿ ಮಂಗಳವಾರ ಭಾಗವಹಿಸಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ‘ಮಾನವಹಕ್ಕುಗಳು ಮತ್ತು ಮನುಷ್ಯರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಎರಡೂ ಸರ್ಕಾರಗಳು ಸೋತಿವೆ. ಬಡತನ, ನಿರುದ್ಯೋಗ, ಪರಿಸರ ಹಾನಿ ಹೆಚ್ಚಾಗಿದೆ. ಗಾಂಧೀಜಿ ಮತ್ತು ಮಾರ್ಕ್ಸ್ ಅವರ ತತ್ವಾದರ್ಶಗಳ ನೆಲೆಯಲ್ಲಿ ಸಾಮಾನ್ಯ ಪ್ರಜೆಗಳ ಕೇಂದ್ರಿತವಾದ ನಿಯಮಗಳನ್ನು ರೂಪಿಸಬೇಕು’ ಎಂದರು.