‘ಪ್ರಾಥಮಿಕ ಶಿಕ್ಷಕರು, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅನುಸರಿಸಿರುವ ನಿಯಮವು ಸಾಮಾನ್ಯ ಮೀಸಲಾತಿ ನಿಯಮಗಳು ಹಾಗೂ 371(ಜೆ) ವಿಶೇಷ ಪ್ರಾದೇಶಿಕ ಮೀಸಲಾತಿಗೆ ಸಂಬಂಧಿಸಿದ ಮೂಲ ಗೆಜೆಟ್ ನಿಯಮಗಳಿಗೆ ವಿರುದ್ಧವಾಗಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಅಧಿಸೂಚನೆ ಹೊರಡಿಸುವ ಮೊದಲು ಸರ್ಕಾರ ನಿಯಮಗಳ ಸುತ್ತೋಲೆಯನ್ನು ಬಿಡುಗಡೆ ಮಾಡಬೇಕು. ಆದರೆ, 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಪರೀಕ್ಷೆ ಪೂರ್ವ ಬಿಡುಗಡೆಯಾಗಿದ್ದ ಸುತ್ತೋಲೆ ರದ್ದುಗೊಳಿಸಿ, ಪರೀಕ್ಷೆ ನಡೆದು ಫಲಿತಾಂಶ ಪ್ರಕಟವಾದ ಬಳಿಕ ಹೊಸ ಸುತ್ತೋಲೆ ಬಿಡುಗಡೆ ಮಾಡಿದೆ. ಅದನ್ನೇ ಶಿಕ್ಷಕರ ನೇಮಕಾತಿಗೆ ಪೂರ್ವಾನ್ವಯ ಮಾಡುತ್ತಿರುವುದು ಕಾನೂನುಬಾಹಿರವಾಗಿದೆ’ ಎಂದು ಅಭ್ಯರ್ಥಿಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.