ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಬಿಜೆಪಿಗೆ ಜಿಗಿಯುತ್ತೇನೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ ಎಂಬುದನ್ನು ಕೇಳಿದೆ. ನಾನು ಹಣ ನೋಡಿ ರಾಜಕೀಯ ಮಾಡುತ್ತಿಲ್ಲ. ಪದವಿ ನೋಡಿ ಶಾಸಕನಾಗಿಲ್ಲ. ಕ್ಷೇತ್ರದ ಜನರ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಅವರ ಆಶಯದಂತೆ ಕಾಂಗ್ರೆಸ್ನಲ್ಲಿಯೇ ಇರುತ್ತೇನೆ’ ಎಂದು ಹೇಳಿದರು.