ಬೆಂಗಳೂರು: ಉಮೇದುವಾರಿಕೆಯನ್ನು ಹಿಂಪಡೆದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಯವರಲ್ಲಿ ಮನವಿ ಮಾಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರವನ್ನು ಇಂದು ವಾಪಸ್ ಪಡೆದಿದ್ದರು. ಈ ನಡುವೆ ಸಿದ್ದರಾಮಯ್ಯ ಅವರ ಹೇಳಿಕೆ ಹಲವು ರಾಜಕೀಯ ಆಯಾಮಗಳನ್ನು ಪಡೆದುಕೊಂಡಿದೆ.
ಮಾಧ್ಯಮ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ,‘ದಿಂಗಾಲೇಶ್ವರ ಸ್ವಾಮೀಜಿಯವರು ಹುಬ್ಬಳ್ಳಿ - ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ಅನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದೆ, ಅದೇ ಸಿದ್ಧಾಂತದ ನಮಗೆ ಅವರ ಬೆಂಬಲ ಅಗತ್ಯವಿದೆ’ ಎಂದಿದ್ದಾರೆ.