ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಆರಂಭದಲ್ಲಿ ಹುದ್ದೆ ಬೇಡ ಎಂದಿದ್ದು ನಿಜ. ನಿಗಮ ಯಾವುದಾದರೂ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. 'ಒಂದು ವರ್ಷ ಉಪಸಭಾಧ್ಯಕ್ಷ ಸ್ಥಾನ ನಿರ್ವಹಿಸು. ಆ ನಂತರ ಸಚಿವ ಸ್ಥಾನ ನೀಡಲಾಗುವುದು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ಹುದ್ದೆ ಒಪ್ಪಿಕೊಂಡಿದ್ದೇನೆ' ಎಂದರು.