ಬೆಂಗಳೂರು: ‘ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೋ ಎಂಬ ಭಯ ಕಾಡುತ್ತಿದೆ’ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಈ ಹಿಂದೆ ಇಲ್ಲಿನ ಸಂಸದರಾಗಿದ್ದ ಡಿ.ಬಿ.ಚಂದ್ರೇಗೌಡ ಮತ್ತು ಡಿ.ವಿ.ಸದಾನಂದಗೌಡ ಅವರ ಜತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಆದರೆ, ಶೋಭಾ ಕರಂದ್ಲಾಜೆ ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಮತೀಯ ಗಲಭೆಗೆ ಉತ್ತೇಜನ ನೀಡುವ ಮಾತು ಆಡುತ್ತಿದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಹೋಗಲು ಭಯ ಆಗುತ್ತಿದೆ’ ಎಂದರು.
‘ಒಂದು ವೇಳೆ ದ್ವೇಷ ಭಾಷಣ ಮುಂದುವರಿದರೆ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ರಕ್ಷಣೆ ಕೇಳಬೇಕಾಗುತ್ತದೆ. ಅವರು ಇಲ್ಲಿಗೆ ಸಂಸದೆಯಾಗಲು ಬಂದಿದ್ದಾರೋ ಅಥವಾ ಜನರನ್ನು ಪ್ರಚೋದಿಸಲು ಬಂದಿದ್ದಾರೋ’ ಎಂದು ಅವರು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.