<p><strong>ತುಮಕೂರು: </strong>ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರ ನಡುವಿನ ವಾಕ್ಸಮರಕ್ಕೆ ಸಾಕ್ಷಿ ಆಯಿತು.</p>.<p>ಮನೆ ದೇವರು ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಬಂದಿದ್ದರು.</p>.<p>ತಮ್ಮ ಭಾಷಣದ ವೇಳೆ ಶಾಸಕ ಡಾ.ಎಚ್.ಡಿ.ರಂಗನಾಥ್, ‘ಹಿಂದಿನ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರವು ನನ್ನ ಕ್ಷೇತ್ರಕ್ಕೆ ₹ 720 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಈಗ ಇವೆಲ್ಲವನ್ನು ತಡೆ ಹಿಡಿದಿದ್ದು ಏಕೆ’ ಎಂದು ಪ್ರಶ್ನಿಸಿದರು. ‘ಇದು ನಿಮ್ಮ ಮನೆ ದೇವರಿರುವ ಕ್ಷೇತ್ರ. ಅಭಿವೃದ್ಧಿಗೆ ಹಣ ನೀಡಿ’ ಎಂದು ಮುಖ್ಯಮಂತ್ರಿ ಅವರಿಗೆ ಆಗ್ರಹಿಸಿದರು.</p>.<p>ಆಗ ಸಿಡಿಮಿಡಿಗೊಂಡ ಯಡಿಯೂರಪ್ಪ ಏರುಧ್ವನಿಯಲ್ಲಿ, ‘ಆಯ್ತು ಸಾಕು ಬಿಡ್ರಿ’ ಎಂದು ಭಾಷಣ ಮುಗಿಸುವಂತೆ ಸೂಚಿಸಿದರು.</p>.<p>‘ನಾನು ಮುಖ್ಯಮಂತ್ರಿಯಾಗಿ ಎರಡು ತಿಂಗಳಾಗಿದೆ. ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ ಎಂಬುದು ನನಗೊಬ್ಬನಿಗೆ ಮಾತ್ರ ಗೊತ್ತು. ಭವಿಷ್ಯದಲ್ಲಿ ಹಣಕಾಸಿನ ಲಭ್ಯತೆ ಆಧರಿಸಿ ಅಭಿವೃದ್ಧಿ ಕಾಮಗಾರಿಗೆ ಹಣ ಒದಗಿಸಲಾಗುವುದು’ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>‘ಹಿಂದಿನ ಸಮ್ಮಿಶ್ರ ಸರ್ಕಾರ ರಾಜ್ಯದ ಹಣಕಾಸಿನ ಇತಿಮಿತಿ ಗಮನಿಸದೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಿದೆ. ಐದಾರು ವರ್ಷ ಆದಾಯ ಸಂಗ್ರಹಿಸಿ ನೀಡಿದರೂ ಆ ಯೋಜನೆಗಳು ಪೂರ್ಣವಾಗುವುದು ಕಷ್ಟವಿದೆ. ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ನಾನು ವಿರೋಧಿಯಲ್ಲ. ಮುಂದೆ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಅನುದಾನ ನೀಡುವೆ’ ಎಂದು ಹೇಳಿದರು.</p>.<p>‘ನೆರೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳಲು ಹೆಚ್ಚಿನ ಹಣ ಒದಗಿಸಲಾಗುತ್ತಿದೆ. ಬೇರೆ ಅಭಿವೃದ್ಧಿ ಕಾರ್ಯಕ್ಕೆ ನಿಗದಿಪಡಿಸಿದ ಹಣವನ್ನೂ ಇದಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದರು.</p>.<p>ಯಡಿಯೂರಪ್ಪ ಅವರ ಕುಟುಂಬವು ₹ 4 ಕೋಟಿ ಸ್ವಂತ ಹಣದಿಂದ ನಿರ್ಮಿಸಲಿರುವ ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.</p>.<p>ಸರ್ಕಾರದ ಅನುದಾನದಲ್ಲಿ ₹ 10 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ₹ 5 ಕೋಟಿ ಮೊತ್ತದ ಸಭಾಭವನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರ ನಡುವಿನ ವಾಕ್ಸಮರಕ್ಕೆ ಸಾಕ್ಷಿ ಆಯಿತು.</p>.<p>ಮನೆ ದೇವರು ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಬಂದಿದ್ದರು.</p>.<p>ತಮ್ಮ ಭಾಷಣದ ವೇಳೆ ಶಾಸಕ ಡಾ.ಎಚ್.ಡಿ.ರಂಗನಾಥ್, ‘ಹಿಂದಿನ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರವು ನನ್ನ ಕ್ಷೇತ್ರಕ್ಕೆ ₹ 720 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಈಗ ಇವೆಲ್ಲವನ್ನು ತಡೆ ಹಿಡಿದಿದ್ದು ಏಕೆ’ ಎಂದು ಪ್ರಶ್ನಿಸಿದರು. ‘ಇದು ನಿಮ್ಮ ಮನೆ ದೇವರಿರುವ ಕ್ಷೇತ್ರ. ಅಭಿವೃದ್ಧಿಗೆ ಹಣ ನೀಡಿ’ ಎಂದು ಮುಖ್ಯಮಂತ್ರಿ ಅವರಿಗೆ ಆಗ್ರಹಿಸಿದರು.</p>.<p>ಆಗ ಸಿಡಿಮಿಡಿಗೊಂಡ ಯಡಿಯೂರಪ್ಪ ಏರುಧ್ವನಿಯಲ್ಲಿ, ‘ಆಯ್ತು ಸಾಕು ಬಿಡ್ರಿ’ ಎಂದು ಭಾಷಣ ಮುಗಿಸುವಂತೆ ಸೂಚಿಸಿದರು.</p>.<p>‘ನಾನು ಮುಖ್ಯಮಂತ್ರಿಯಾಗಿ ಎರಡು ತಿಂಗಳಾಗಿದೆ. ರಾಜ್ಯದ ಹಣಕಾಸು ಸ್ಥಿತಿ ಹೇಗಿದೆ ಎಂಬುದು ನನಗೊಬ್ಬನಿಗೆ ಮಾತ್ರ ಗೊತ್ತು. ಭವಿಷ್ಯದಲ್ಲಿ ಹಣಕಾಸಿನ ಲಭ್ಯತೆ ಆಧರಿಸಿ ಅಭಿವೃದ್ಧಿ ಕಾಮಗಾರಿಗೆ ಹಣ ಒದಗಿಸಲಾಗುವುದು’ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>‘ಹಿಂದಿನ ಸಮ್ಮಿಶ್ರ ಸರ್ಕಾರ ರಾಜ್ಯದ ಹಣಕಾಸಿನ ಇತಿಮಿತಿ ಗಮನಿಸದೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಿದೆ. ಐದಾರು ವರ್ಷ ಆದಾಯ ಸಂಗ್ರಹಿಸಿ ನೀಡಿದರೂ ಆ ಯೋಜನೆಗಳು ಪೂರ್ಣವಾಗುವುದು ಕಷ್ಟವಿದೆ. ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ನಾನು ವಿರೋಧಿಯಲ್ಲ. ಮುಂದೆ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಅನುದಾನ ನೀಡುವೆ’ ಎಂದು ಹೇಳಿದರು.</p>.<p>‘ನೆರೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳಲು ಹೆಚ್ಚಿನ ಹಣ ಒದಗಿಸಲಾಗುತ್ತಿದೆ. ಬೇರೆ ಅಭಿವೃದ್ಧಿ ಕಾರ್ಯಕ್ಕೆ ನಿಗದಿಪಡಿಸಿದ ಹಣವನ್ನೂ ಇದಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದರು.</p>.<p>ಯಡಿಯೂರಪ್ಪ ಅವರ ಕುಟುಂಬವು ₹ 4 ಕೋಟಿ ಸ್ವಂತ ಹಣದಿಂದ ನಿರ್ಮಿಸಲಿರುವ ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.</p>.<p>ಸರ್ಕಾರದ ಅನುದಾನದಲ್ಲಿ ₹ 10 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ₹ 5 ಕೋಟಿ ಮೊತ್ತದ ಸಭಾಭವನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>