<p><strong>ಬೆಂಗಳೂರು</strong>: ‘ನಾನು ಎಲ್ಲ ಶಾಸಕರ ಕೈಗೆ ಸಿಗುತ್ತೇನೆ. ಬೇರೆ ಸಚಿವರು ಸಿಗದೇ ಹೋದರೆ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕರು ಮತ್ತು ಮುಖ್ಯಮಂತ್ರಿ ನಡುವೆ ಕೂಡಾ ಗೊಂದಲ ಇಲ್ಲ’ ಎಂದರು.</p>.<p>‘ಕೆಲವು ಶಾಸಕರು ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಮುಖ್ಯಮಂತ್ರಿಯವರು ಇದೆಲ್ಲವನ್ನೂ ಗಮನಿಸುತ್ತಾರೆ. ಇದಕ್ಕೆ ಇಡೀ ಸರ್ಕಾರವೇ ಗೊಂದಲದಲ್ಲಿದೆ ಎಂದು ಹೇಳುವುದು ಸರಿಯಲ್ಲ’ ಎಂದರು.</p>.<p>‘ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಯಾಕೆ ಬರುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಅವರು ಶಾಸಕರ ಜೊತೆ ಮಾತನಾಡಬಹುದು’ ಎಂದರು.</p>.<p>ಸುರ್ಜೇವಾಲಾ ಅವರನ್ನು ಉಸ್ತುವಾರಿ ಸ್ಥಾನದಿಂದ ಬದಲಿಸುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಇದು ಹೈಕಮಾಂಡ್ಗೆ ಸಂಬಂಧಿಸಿದ ವಿಷಯ. ಎಐಸಿಸಿಗೆ ಸಂಬಂಧಿಸಿದ ವಿಷಯ ನಾನು ಹೇಗೆ ಮಾತನಾಡಲಿ? ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ ಈ ಬಗ್ಗೆ ತೀರ್ಮಾನಿಸುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾನು ಎಲ್ಲ ಶಾಸಕರ ಕೈಗೆ ಸಿಗುತ್ತೇನೆ. ಬೇರೆ ಸಚಿವರು ಸಿಗದೇ ಹೋದರೆ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕರು ಮತ್ತು ಮುಖ್ಯಮಂತ್ರಿ ನಡುವೆ ಕೂಡಾ ಗೊಂದಲ ಇಲ್ಲ’ ಎಂದರು.</p>.<p>‘ಕೆಲವು ಶಾಸಕರು ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಮುಖ್ಯಮಂತ್ರಿಯವರು ಇದೆಲ್ಲವನ್ನೂ ಗಮನಿಸುತ್ತಾರೆ. ಇದಕ್ಕೆ ಇಡೀ ಸರ್ಕಾರವೇ ಗೊಂದಲದಲ್ಲಿದೆ ಎಂದು ಹೇಳುವುದು ಸರಿಯಲ್ಲ’ ಎಂದರು.</p>.<p>‘ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಯಾಕೆ ಬರುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಅವರು ಶಾಸಕರ ಜೊತೆ ಮಾತನಾಡಬಹುದು’ ಎಂದರು.</p>.<p>ಸುರ್ಜೇವಾಲಾ ಅವರನ್ನು ಉಸ್ತುವಾರಿ ಸ್ಥಾನದಿಂದ ಬದಲಿಸುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಇದು ಹೈಕಮಾಂಡ್ಗೆ ಸಂಬಂಧಿಸಿದ ವಿಷಯ. ಎಐಸಿಸಿಗೆ ಸಂಬಂಧಿಸಿದ ವಿಷಯ ನಾನು ಹೇಗೆ ಮಾತನಾಡಲಿ? ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ ಈ ಬಗ್ಗೆ ತೀರ್ಮಾನಿಸುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>