<p><strong>ಬೆಳಗಾವಿ</strong>: ‘ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕ ಏನಲ್ಲ.ಅನೇಕ ಹಿರಿಯ ನಾಯಕರು ಇದ್ದಾರೆ. ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೂರು ಜನರಂತಹ ಸಿದ್ದರಾಮಯ್ಯ ಬಂದರೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಕ್ಕೆ ಬಯಸುವುದಿಲ್ಲ. ಪಕ್ಷವನ್ನು ಮುಂದೆಯೂ ಅಧಿಕಾರಕ್ಕೆ ತರುವುದೊಂದೇ ನನ್ನ ಗುರಿಯಾಗಿದೆ’ ಎಂದರು.</p>.<p>ಹೈಕಮಾಂಡ್ನಿಂದ ಸಂದೇಶ ಬಂದಿತೇ ಎಂಬ ಪ್ರಶ್ನೆಗೆ ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ ಹೇಳಿದರು.</p>.<p>ಇದಕ್ಕೂ ಮುನ್ನ ಬೆಳಗಾವಿಜಿಲ್ಲೆಯಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.</p>.<p>ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಬಳಿಕ ಮಾತನಾಡಿದ ಯಡಿಯೂರಪ್ಪಅವರು,ಉತ್ತರ ಕನ್ನಡ ಜಿಲ್ಲೆಗೆ ಜುಲೈ 26ರಂದು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/curiosity-rover-bs-yediyurappa-political-step-851471.html" target="_blank">ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್ವೈ ನಡೆ ನಿಗೂಢ!</a><br /><strong>ಇದನ್ನೂ ಓದಿ:</strong><a href="https://www.prajavani.net/district/belagavi/cm-change-in-karnataka-high-command-message-will-come-by-evening-says-bs-yediyurappa-851519.html" target="_blank">ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ: ಬಿಎಸ್ವೈ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕ ಏನಲ್ಲ.ಅನೇಕ ಹಿರಿಯ ನಾಯಕರು ಇದ್ದಾರೆ. ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೂರು ಜನರಂತಹ ಸಿದ್ದರಾಮಯ್ಯ ಬಂದರೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಕ್ಕೆ ಬಯಸುವುದಿಲ್ಲ. ಪಕ್ಷವನ್ನು ಮುಂದೆಯೂ ಅಧಿಕಾರಕ್ಕೆ ತರುವುದೊಂದೇ ನನ್ನ ಗುರಿಯಾಗಿದೆ’ ಎಂದರು.</p>.<p>ಹೈಕಮಾಂಡ್ನಿಂದ ಸಂದೇಶ ಬಂದಿತೇ ಎಂಬ ಪ್ರಶ್ನೆಗೆ ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ ಹೇಳಿದರು.</p>.<p>ಇದಕ್ಕೂ ಮುನ್ನ ಬೆಳಗಾವಿಜಿಲ್ಲೆಯಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.</p>.<p>ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಬಳಿಕ ಮಾತನಾಡಿದ ಯಡಿಯೂರಪ್ಪಅವರು,ಉತ್ತರ ಕನ್ನಡ ಜಿಲ್ಲೆಗೆ ಜುಲೈ 26ರಂದು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/curiosity-rover-bs-yediyurappa-political-step-851471.html" target="_blank">ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್ವೈ ನಡೆ ನಿಗೂಢ!</a><br /><strong>ಇದನ್ನೂ ಓದಿ:</strong><a href="https://www.prajavani.net/district/belagavi/cm-change-in-karnataka-high-command-message-will-come-by-evening-says-bs-yediyurappa-851519.html" target="_blank">ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ: ಬಿಎಸ್ವೈ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>