ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಿಎಂ ಅಧಿಕಾರಿಗಳನ್ನು ಅವಮಾನಿಸಿದಾಗ IAS ಸಂಘ ಎಲ್ಲಿ ಹೋಗಿತ್ತು?: ವಿಜಯೇಂದ್ರ

Published : 4 ಜುಲೈ 2025, 13:07 IST
Last Updated : 4 ಜುಲೈ 2025, 13:07 IST
ಫಾಲೋ ಮಾಡಿ
Comments
ವಾಲ್ಮೀಕಿ ಹಗರಣ ವಿಷಯಾಂತರಕ್ಕೆ ಯತ್ನ: ಜೋಶಿ
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಹೈಕೋರ್ಟ್‌ ಸಿಬಿಐಗೆ ಒಪ್ಪಿಸಿದ ವಿಚಾರವನ್ನು ಮರೆ ಮಾಚಲು ಕಾಂಗ್ರೆಸ್‌ ಸರ್ಕಾರ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್ ವಿಚಾರವನ್ನು ಮುನ್ನೆಲೆಗೆ ತಂದಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದೂರಿದರು. ‘ರಾಜ್ಯದ ಮುಖ್ಯ ಕಾರ್ಯದರ್ಶಿ ವಿಚಾರದಲ್ಲಿ ರವಿಕುಮಾರ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಸರ್ಕಾರ ಎಫ್‌ಐಆರ್‌ ದಾಖಲಿಸಿದೆ. ತನಿಖೆ ನಡೆಸಲಿ. ಆದರೆ ಕಾಂಗ್ರೆಸ್‌ ಸರ್ಕಾರ ತಮ್ಮ ಹುಳುಕು ಮುಚ್ಚಿಕೊಳ್ಳಲು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ’ ಎಂದರು.
ಮಾತಿನಲ್ಲಿ ತೂಕವಿರಲಿ: ಡಿವಿಎಸ್‌
‘ಯಾರೇ ಇರಲಿ ಮಾತಿನಲ್ಲಿ ತೂಕ ಇರಬೇಕು. ಪ್ರಮುಖ ನಾಯಕರು ಮತ್ತು ಪ್ರಮುಖ ಹುದ್ದೆಯಲ್ಲಿ ಇರುವವರ ಮಾತುಗಳು ಗೌರವ ತರುವಂತಿರಬೇಕು. ಇಲ್ಲವಾದರೆ ತೊಂದರೆ ಆಗುತ್ತದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು. ಎನ್‌.ರವಿಕುಮಾರ್ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಕುರಿತು ಆಡಿರುವ ಮಾತಿನ ಬಗ್ಗೆ ಪ್ರಶ್ನಿಸಿದಾಗ ‘ಪಕ್ಷದ ಕೆಲವು ನಾಯಕರ ಮಾತುಗಳಿಂದ ಗೊಂದಲ ಉಂಟಾಗಿದೆ. ಆ ರೀತಿ ಆಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT