ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ರಾಕೇಶ್‌ ಸಿಂಗ್‌, ವಿ.ಮಂಜಳಾ ನಿವೃತ್ತಿ

Published 31 ಮೇ 2024, 16:47 IST
Last Updated 31 ಮೇ 2024, 16:47 IST
ಅಕ್ಷರ ಗಾತ್ರ

ಬೆಂಗಳೂರು: ನಗರಾಭಿವೃದ್ಧಿ, ಜಲಸಂಪನ್ಮೂಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.

ಇವರ ನಿವೃತ್ತಿಯಿಂದ ತೆರವಾದ ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹುದ್ದೆಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್‌.ಆರ್‌, ಜಲಸಂಪನ್ಮೂಲ ಇಲಾಖೆ ಹೊಣೆಗಾರಿಕೆಯನ್ನು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯನ್ನು ಶಾಲಿನಿ ರಜನೀಶ್ ಅವರಿಗೆ ನೀಡಲಾಗಿದೆ.

ಹಿರಿಯ ಐಎಎಸ್ ಅಧಿಕಾರಿ ವಿ.ಮಂಜುಳಾ ಅವರ ನಿವೃತ್ತಿಯಿಂದ ತೆರವಾಗಿರುವ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ(ಕೆಎಟಿ) ಅಧ್ಯಕ್ಷ ಹುದ್ದೆಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT