ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ ಸಂಸದ, ಶಾಸಕರು ಮತ್ತು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಕಾರಣ. ಮೊದಲಿಗೆ ಒಬ್ಬ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದರಲ್ಲೂ ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಪರ ಇದ್ದರು. ಬಳಿಕ ವಿರೋಧಿಸಿದರು. ಇಬ್ಬರು ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಶಾಸಕರು’ ಎಂದು ಆಪಾದಿಸಿದರು