ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಎಂ.ಎಸ್. ಶ್ರೀಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಶ್ರೀಕರ್ ಅವರನ್ನು ಇತ್ತೀಚೆಗೆ ಡಿಪಿಎಆರ್ನ ಆಡಳಿತ ಸುಧಾರಣಾ ವಿಭಾಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಆಹಾರ ಇಲಾಖೆಯ ಆಯುಕ್ತರಾಗಿರುವ ಎಂ. ಕನಗವಲ್ಲಿ ಅವರನ್ನು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ, ಸ್ಥಳ ನಿರೀಕ್ಷಣೆಯಲ್ಲಿದ್ದ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರಿಗೆ ಆಹಾರ ಇಲಾಖೆಯ ಆಯುಕ್ತ ಹುದ್ದೆ ನೀಡಲಾಗಿದೆ.