<p><strong>ಬೆಂಗಳೂರು:</strong> ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣರೆಡ್ಡಿ ಅವರನ್ನು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಕುಮಾರಸ್ವಾಮಿ ಅವರ ಕಾರ್ಯದರ್ಶಿಯಾಗಿದ್ದ ಎಸ್. ಸೆಲ್ವಕುಮಾರ್ ಅವರನ್ನು ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಎಂ.ಕೆ. ಶ್ರೀರಂಗಯ್ಯ ಅವರನ್ನು ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಎ.ಆರ್. ರವಿ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಉಪ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಮುಖ್ಯಮಂತ್ರಿ ತವರು ಜಿಲ್ಲೆಯಾದ ಶಿವಮೊಗ್ಗ ನಗರಪಾಲಿಕೆ ಆಯುಕ್ತರಾಗಿದ್ದ ರವಿ, ಅಲ್ಲಿ ಭ್ರಷ್ಟಾಚಾರ ತೊಡೆದು ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಪ್ರತಿನಿಧಿಗಳ ಸಿಟ್ಟಿಗೆ ಗುರಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಕೆಲಸ ಮಾಡಿದ ಅವಧಿಯಲ್ಲಿ ಶಿವಮೊಗ್ಗದ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.</p>.<p>ವಾರ್ತಾ ಇಲಾಖೆಯ ನಿರ್ದೇಶಕರಾಗಿದ್ದ ಎನ್. ಭೃಂಗೀಶ್ ಅವರನ್ನು ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಭೃಂಗೀಶ್ ಅವರು ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣರೆಡ್ಡಿ ಅವರನ್ನು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಕುಮಾರಸ್ವಾಮಿ ಅವರ ಕಾರ್ಯದರ್ಶಿಯಾಗಿದ್ದ ಎಸ್. ಸೆಲ್ವಕುಮಾರ್ ಅವರನ್ನು ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಎಂ.ಕೆ. ಶ್ರೀರಂಗಯ್ಯ ಅವರನ್ನು ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಎ.ಆರ್. ರವಿ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಉಪ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಮುಖ್ಯಮಂತ್ರಿ ತವರು ಜಿಲ್ಲೆಯಾದ ಶಿವಮೊಗ್ಗ ನಗರಪಾಲಿಕೆ ಆಯುಕ್ತರಾಗಿದ್ದ ರವಿ, ಅಲ್ಲಿ ಭ್ರಷ್ಟಾಚಾರ ತೊಡೆದು ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಪ್ರತಿನಿಧಿಗಳ ಸಿಟ್ಟಿಗೆ ಗುರಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಕೆಲಸ ಮಾಡಿದ ಅವಧಿಯಲ್ಲಿ ಶಿವಮೊಗ್ಗದ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.</p>.<p>ವಾರ್ತಾ ಇಲಾಖೆಯ ನಿರ್ದೇಶಕರಾಗಿದ್ದ ಎನ್. ಭೃಂಗೀಶ್ ಅವರನ್ನು ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಭೃಂಗೀಶ್ ಅವರು ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>