ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸನ್ನ

Published 12 ಜನವರಿ 2024, 15:40 IST
Last Updated 12 ಜನವರಿ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎಚ್.ಪ್ರಸನ್ನ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ  ವರ್ಗಾವಣೆ ಮಾಡಲಾಗಿದೆ.

ಈ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದ ಎಸ್. ರಮ್ಯಾ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ವರ್ಗಾವಣೆಯಾದವರು:

ಎಂ.ಟಿ. ರೇಜು–ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ರಾಜ್ಯ ಹಣಕಾಸು ನಿಗಮ; ಸಲ್ಮಾ ಕೆ ಫಾಹಿಮಾ– ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಜ್ವಲ್ ಕುಮಾರ್ ಘೋಷ್–ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಇ–ಆಡಳಿತ); ಶಿಲ್ಪಾ ಶರ್ಮಾ–ಪರೀಕ್ಷಾ ನಿಯಂತ್ರಕಿ, ಕರ್ನಾಟಕ ಲೋಕಸೇವಾ ಆಯೋಗ; ಭೋಯರ್ ಹರ್ಷಲ್ ನಾರಾಯಣರಾವ್–ನಿರ್ದೇಶಕ, ಅಟಲ್ ಜನಶಕ್ತಿ ಕೇಂದ್ರ.

ಸಂಗಪ್ಪ–ಕಾರ್ಯನಿರ್ವಾಹಕ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್;  ರಾಹುಲ್ ಶಿಂದೆ– ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಬೆಳಗಾವಿ; ಪ್ರತೀಕ್ ಬಾಯಲ್–ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಉಡುಪಿ.; ರಿಷಿ ಆನಂದ್– ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ವಿಜಯಪುರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT