<p><strong>ಬೆಂಗಳೂರು</strong>: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಪ್ರಕಟಣೆ ಹೊರಡಿಸಿದೆ.</p><p>ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಡಾ. ಕೆ.ವಿ. ತ್ರಿಲೋಕಚಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದೇ ಸ್ಥಾನದಲ್ಲಿದ್ದ ಸಲ್ಮಾ ಕೆ. ಫಾಹಿಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆಯಾದರೂ ಸ್ಥಳ ನಿಯುಕ್ತಿಗೊಳಿಸಲ್ಲ.</p><p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಇಲಾಖೆಯ ಆಯುಕ್ತ ಶಿವಕುಮಾರ್ ಕೆ. ಬಿ.ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ. ಇವರು ಆರೋಗ್ಯ ಇಲಾಖೆಯೊಂದಿಗೆ ಬಿಎಂಆರ್ಸಿಎಲ್ ಎಂಡಿ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದರು.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ (ಆರೋಗ್ಯ ಮತ್ತು ಶಿಕ್ಷಣ) ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ನೇಮಿಸಲಾಗಿದ್ದು, ಅವರಿಗೆ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ. ಇದೇ ಹುದ್ದೆಯಲ್ಲಿ ಈ ಹಿಂದೆ ಡಾ. ಕೆ.ವಿ. ತ್ರಿಲೋಕಚಂದ್ರ ಅವರಿದ್ದರು.</p><p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ರಾಮಚಂದ್ರನ್ ಆರ್. ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಸ್ಥಳ ನಿಯುಕ್ತಿಗೊಳಿಸಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಪ್ರಕಟಣೆ ಹೊರಡಿಸಿದೆ.</p><p>ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಡಾ. ಕೆ.ವಿ. ತ್ರಿಲೋಕಚಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದೇ ಸ್ಥಾನದಲ್ಲಿದ್ದ ಸಲ್ಮಾ ಕೆ. ಫಾಹಿಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆಯಾದರೂ ಸ್ಥಳ ನಿಯುಕ್ತಿಗೊಳಿಸಲ್ಲ.</p><p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಇಲಾಖೆಯ ಆಯುಕ್ತ ಶಿವಕುಮಾರ್ ಕೆ. ಬಿ.ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ. ಇವರು ಆರೋಗ್ಯ ಇಲಾಖೆಯೊಂದಿಗೆ ಬಿಎಂಆರ್ಸಿಎಲ್ ಎಂಡಿ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದರು.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ (ಆರೋಗ್ಯ ಮತ್ತು ಶಿಕ್ಷಣ) ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ನೇಮಿಸಲಾಗಿದ್ದು, ಅವರಿಗೆ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ. ಇದೇ ಹುದ್ದೆಯಲ್ಲಿ ಈ ಹಿಂದೆ ಡಾ. ಕೆ.ವಿ. ತ್ರಿಲೋಕಚಂದ್ರ ಅವರಿದ್ದರು.</p><p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ರಾಮಚಂದ್ರನ್ ಆರ್. ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಸ್ಥಳ ನಿಯುಕ್ತಿಗೊಳಿಸಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>